- Advertisement -
- Advertisement -
ಪುತ್ತೂರು: 2020ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ, ಸಂಶೋಧಕ ಪ್ರೊ.ಅಮೃತ ಸೋಮೇಶ್ವರ ಅವರು ಆಯ್ಕೆಯಾಗಿದ್ದಾರೆ.
ಪುತ್ತೂರಿನ ಶಿವರಾಮ ಕಾರಂತ ಬಾಲವನ ಕೊಡಮಾಡುವ ಶಿವರಾಮ ಕಾರಂತ ಪ್ರಶಸ್ತಿಯನ್ನು ಅಕ್ಟೋಬರ್ 10ರಂದು ಮಧ್ಯಾಹ್ನ ಬಾಲವನದಲ್ಲಿ ನಡೆಯುವ ಡಾ.ಶಿವರಾಮ ಕಾರಂತರ ಜನ್ಮ ದಿನಾಚರಣೆಯಲ್ಲಿ ಸೋಮೇಶ್ವರ ಅವರಿಗೆ ನೀಡಿ ಗೌರವಿಸಲಾಗುವುದು.
ಸುಳ್ಯದ ಕುರುಂಜಿ ವೆಂಕಟರಮಣ ಗೌಡ ದತ್ತಿನಿಧಿ ಮೂಲಕ ಬಾಲವನವು ಕಾರಂತರ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡುತ್ತಿದೆ.
- Advertisement -