Friday, July 31, 2026
Homeಪ್ರಮುಖ-ಸುದ್ದಿಆಗಸ್ಟ್ 13ರಂದು 'ಅಖಂಡ ಕರ್ನಾಟಕ ಬಂದ್'ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು

ಆಗಸ್ಟ್ 13ರಂದು ‘ಅಖಂಡ ಕರ್ನಾಟಕ ಬಂದ್’ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು

- Advertisement -
- Advertisement -

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದ ರಾಜ್ಯದಲ್ಲಿ ಮತ್ತೆ ಕಾವು ಪಡೆದುಕೊಂಡಿದ್ದು, ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಬೃಹತ್ ಹೋರಾಟಕ್ಕೆ ಮುಂದಾಗಿವೆ. ಇದರ ಭಾಗವಾಗಿ ಆಗಸ್ಟ್ 13ರಂದು ರಾಜ್ಯಾದ್ಯಂತ ಪೂರ್ಣ ಪ್ರಮಾಣದ ಬಂದ್‌ಗೆ ಕರೆ ನೀಡಲಾಗಿದೆ.

ನಗರದ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ನಡೆದ ವಿವಿಧ ಕನ್ನಡ ಒಕ್ಕೂಟಗಳ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ‘ಕನ್ನಡ ಚಳವಳಿ ವಾಟಾಳ್ ಪಕ್ಷ’ದ ಅಧ್ಯಕ್ಷ ವಾಟಾಳ್ ನಾಗರಾಜ್, ಆಗಸ್ಟ್ 13ರ ಗುರುವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ‘ಅಖಂಡ ಕರ್ನಾಟಕ ಬಂದ್’ ನಡೆಯಲಿದೆ ಎಂದು ಘೋಷಿಸಿದರು. “ವಿದ್ಯಾರ್ಥಿಗಳ ಪರೀಕ್ಷೆಗಳಿಗೆ ತೊಂದರೆಯಾಗದಂತೆ ದಿನಾಂಕವನ್ನು ಕಾಯ್ದಿರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ವಿಜಯ್‌ಗೆ ನೇರ ಎಚ್ಚರಿಕೆ ನೀಡಿದ ವಾಟಾಳ್, ಕಾವೇರಿ ವಿಚಾರದಲ್ಲಿ ನಾಟಕೀಯ ಸಭೆಗಳನ್ನು ನಡೆಸುವುದನ್ನು ನಿಲ್ಲಿಸಬೇಕು ಎಂದರು. ಸರ್ಕಾರವು ಕೇವಲ ಸರ್ವಪಕ್ಷ ಸಭೆ ಕರೆದು ಕಾಲಹರಣ ಮಾಡದೆ, ಕಟ್ಟುನಿಟ್ಟಿನ ನಿರ್ಧಾರ ತಳೆಯಬೇಕು. ಹಾಗೆಯೇ ಸ್ಥಳೀಯರಿಗೆ ಉದ್ಯೋಗ ಹಾಗೂ ಕನ್ನಡ ಶಾಲೆಗಳ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

- Advertisement -

Latest News

error: Content is protected !!