- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿಯಾಗಿ ಪಿ. ಶ್ರವಣ್ ಕುಮಾರ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಶ್ರವಣ್ ಕುಮಾರ್ ಅವರನ್ನು ದ.ಕ. ಜಿಲ್ಲಾಧಿಕಾರಿ ಕಛೇರಿಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ವಾಗತಿಸಿದರು.
2023 ನೇ ಸಾಲಿನ ಯುಪಿಎಸ್ ಸಿ ಪರೀಕ್ಷೆಯಲ್ಲಿ 222 ನೇ ರ್ಯಾಂಕ್ ಪಡೆದಿರುವ ಶ್ರವಣ್ ಕುಮಾರ್, 2021 ರ ಯುಪಿಎಸ್ಸಿ ಪರೀಕ್ಷೆಯಲ್ಲಿ 521 ನೇ ರ್ಯಾಂಕ್ ನೊಂದಿಗೆ ಐಆರ್ ಎಸ್ ಸೇವೆಗೆ ಆಯ್ಕೆಯಾಗಿದ್ದರು.
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಮೂಲದವರಾಗಿರುವ ಶ್ರವಣ್ ಕುಮಾರ್, ಬಿ.ಟೆಕ್ ಪದವೀಧರರಾಗಿದ್ದಾರೆ
- Advertisement -