- Advertisement -
- Advertisement -
ಕಲಬುರಗಿ: ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ ಎದುರಾಗಿದೆ. ಇಂದು ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಲಬುರಗಿಯ ಜೇವರ್ಗಿ ಪಟ್ಟಣಕ್ಕೆ ಆಗಮಿಸುವ ವೇಳೆ ಈ ಘಟನೆ ನಡೆದಿದೆ.
ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಪ್ಲಾಸ್ಟಿಕ್ ಹಾರಿ ಕೆಲಕಾಲ ಗೊಂದಲ ಸೃಷ್ಟಿಯಾಗಿತ್ತು. ತಕ್ಷಣ ಹೆಲಿಕಾಪ್ಟರ್ನ ಬೇರೆಡೆಗೆ ತೆಗೆದುಕೊಂಡು ಹೋಗಲಾಗಿದೆ. ಲ್ಯಾಂಡಿಂಗ್ ಆಗುವ ಸ್ಥಳದ ಸುತ್ತಮುತ್ತ ಯಾವುದೇ ವಸ್ತುಗಳು ಇರದಂತೆ ಸ್ವಚ್ಛತೆ ಕಾಪಾಡಬೇಕು. ಆದ್ರೆ ಈ ಬಗ್ಗೆ ಗಮನ ಹರಿಸದೇ ಇದ್ದ ಕಾರಣ ಈ ಸಮಸ್ಯೆ ತಲೆದೋರಿದೆ ಎನ್ನಲಾಗಿದೆ.
- Advertisement -