- Advertisement -
- Advertisement -
ಬೆಂಗಳೂರು: ಹಾಲಿನ ದರ ಏರಿಕೆಗೆ ಬಗ್ಗೆ ಪ್ರಸ್ತಾಪವಾಗುತ್ತಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.
ಅವರು ನಗರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, “ಹಾಲಿನ ಒಕ್ಕೂಟದ ಸಭೆಯು ಬುಧವಾರದಂದು ನಡೆದಿದ್ದು, ಈ ಸಂದರ್ಭದಲ್ಲಿ 5 ರೂ. ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಇನ್ನೂ ನಂದಿನಿ ಹಾಲಿನಲ್ಲಿ 50 ಎಂಎಲ್ ಹೆಚ್ಚುವರಿ ನೀಡಿ, 2 ರೂ. ಹೆಚ್ಚಳ ಮಾಡಲಾಗಿತ್ತು. ಈ ಹೆಚ್ಚುವರಿ ಹಾಲು ವಾಪಸ್ಗೆ ನಿರ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
- Advertisement -