ಕಾವೂರಿನಲ್ಲಿರುವ ವೇಶ್ಯಾವಾಟಿಕೆ ಕೇಂದ್ರದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ, ಕಾವೂರಿನಲ್ಲಿರುವ ಮನೆಯೊಂದರಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಿಸಿದ್ದಾರೆ.
ಬಂಧಿತರನ್ನು ಉಡುಪಿಯ ಉಳಿಯಾರಗೋಳಿ ನಿವಾಸಿ ಅಬ್ದುಲ್ ಹಫೀಜ್ (55) ಮತ್ತು ಕಾಟಿಪಳ್ಳದ ಕೃಷ್ಣಾಪುರ ನಿವಾಸಿ ರಮ್ಲತ್ (46) ಎಂದು ಗುರುತಿಸಲಾಗಿದೆ.
ಕಾವೂರಿನಲ್ಲಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳು ಕಾವೂರು ಕಟ್ಟೆಯಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ ಕೇಂದ್ರ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬೆಂಗಳೂರು, ಮೈಸೂರು, ಉಡುಪಿ, ಮಂಗಳೂರಿನಿಂದ ಹುಡುಗಿಯರನ್ನು ಕರೆತಂದು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದರು.
ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರ ಬಳಿಯಿದ್ದ 3 ಮೊಬೈಲ್ ಫೋನ್ ಗಳು, ಸ್ಕಾರ್ಪಿಯೋ ಕಾರು ಹಾಗೂ 10,060 ರೂ.ಗಳ ನಗದು ಸೇರಿದಂತೆ 3.45 ಲಕ್ಷ ರೂ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.