Sunday, June 29, 2025
Homeಕರಾವಳಿಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ;  ಹಲ್ಲೆ ಖಂಡಿಸಿ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನಾ...

ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ;  ಹಲ್ಲೆ ಖಂಡಿಸಿ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ

spot_img
- Advertisement -
- Advertisement -

ಪುತ್ತೂರು; ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಖಂಡಿಸಿ  ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ವತಿಯಿಂದ ಕಿಲ್ಲೆ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಈ ವೇಳೆ ಮಾತನಾಡಿದ  ಜಿ.ಪಂ ಮಾಜಿ ಉಪಾಧ್ಯಕ್ಷ ಎಂ.ಎಸ್ ಮಹಮ್ಮದ್  ಅವರು  ಕಾಣಿಯೂರಿನಲ್ಲಿ ವ್ಯಾಪಾರಿಗಳಿಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದು ಖಂಡನೀಯವಾಗಿದ್ದು ಇಂತಹ ಕೃತ್ಯಗಳನ್ನು  ಸಹಿಸಲು ಸಾಧ್ಯವಿಲ್ಲ. ಮನುಷ್ಯತ್ವ, ಮಾನವೀಯತೆ, ಸಂಸ್ಕಾರ ಇಲ್ಲದವರು ಈ ಕೃತ್ಯ ಎಸಗಿದ್ದಾರೆ ಅವರೆಲ್ಲರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಅವರು ಒತ್ತಾಯಿಸಿದರು.

ಮುಸ್ಲಿಂ ಜಸ್ಟೀಸ್ ಫಾರಂನ ಸ್ಥಾಪಕಾಧ್ಯಕ್ಷ ರಫಿಯುದ್ದೀನ್ ಕುದ್ರೋಳಿ ಮಾತನಾಡಿ ಕಾಣಿಯೂರಿನಲ್ಲಿ ಇಬ್ಬರು ಅಮಾಯಕರ ಮೇಲೆ ಮಾರಣಾಂತಿಕ ಗುಂಪು ಹಲ್ಲೆ ನಡೆದಿರುವುದನ್ನು ನಾಗರಿಕ ಸಮಾಜ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಮುಸ್ಲಿಂ ವ್ಯಾಪಾರಿಗಳ ಬದಲು ಬೇರೆಯವರಿಗೆ  ಈ ರೀತಿಯ ಹಲ್ಲೆ ನಡೆದಿದ್ದರೆ ಇದೀಗ ಜಿಲ್ಲೆಗೆ ಬೆಂಕಿ ಬೀಳುತ್ತಿತ್ತು. ಕಾಣಿಯೂರಿನ ಘಟನೆ ಗಂಭೀರ ಘಟನೆಯಾದರೂ ರಾಜ್ಯ ಮಟ್ಟದ ಮಾಧ್ಯಮಗಳು ಮೌನಕ್ಕೆ ಶರಣಾಗಿವೆ. ಸಣ್ಣ ಪುಟ್ಟ ಪ್ರಕರಣಗಳನ್ನೂ ಎನ್ಐಎ, ಸಿಬಿಐಗೆ ಒಪ್ಪಿಸುವ ಸರಕಾರ ಇದನ್ನೂ ಎನ್ಐಎಗೆ ಒಪ್ಪಿಸಿ ಎಂದರು.

ಎಸ್ಕೆಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಅನೀಸ್ ಕೌಸರಿ ಮಾತನಾಡಿ  ರಾಜ್ಯದ ಪತ್ರಿಕಾ ಮಾಧ್ಯಮಗಳೂ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ. ಕೋಮು ವಿಷಬೀಜ ಬಿತ್ತುವವರ ಮೇಲೆ ಪೊಲೀಸರು ಯಾಕೆ ಕೇಸು ದಾಖಲಿಸುತ್ತಿಲ್ಲ ಎಂದು ಪ್ರಶ್ನಿಸಿದರು.

- Advertisement -
spot_img

Latest News

error: Content is protected !!