Saturday, June 29, 2024
Homeಕರಾವಳಿಉಡುಪಿಉಡುಪಿ:ಎರಡನೇ ದಿನಕ್ಕೆ ಕಾಲಿರಿಸಿದ ಅಂಗನವಾಡಿ ನೌಕರರ ಧರಣಿ!

ಉಡುಪಿ:ಎರಡನೇ ದಿನಕ್ಕೆ ಕಾಲಿರಿಸಿದ ಅಂಗನವಾಡಿ ನೌಕರರ ಧರಣಿ!

spot_img
- Advertisement -
- Advertisement -

ಉಡುಪಿ:ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಅನಿರ್ಧಿಷ್ಟಾವಾಧಿ ಧರಣಿ ಸತ್ಯಾಗ್ರಹವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳವಾರವೂ ಮುಂದುವರೆದಿದೆ.

ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ ನೌಕರರು ಬೆಳಗ್ಗೆಯಿಂದ ಸಂಜೆಯವರೆಗೆ ಧರಣಿ ನಡೆಸಿದ್ದಾರೆ. ಧರಣಿಯಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಭಾರತಿ, ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ, ಖಜಾಂಚಿ ಯಶೋಧ, ಬ್ರಹ್ಮವಾರ ವಲಯ ಮುಖಂಡರಾದ ಜಯಲಕ್ಷ್ಮೀ, ಸರೋಜಿನಿ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ತಾಲೂಕು ಕಾರ್ಯರ್ಶಿ ಕವಿರಾಜ್ ಎಸ್. ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!