- Advertisement -
- Advertisement -
ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು ಸಂಚಾರ ಸ್ಥಗಿತದಿಂದ ಪುತ್ತೂರು , ಮಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುವ ಅನೇಕ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ.
ಈ ನಿಟ್ಟಿನಲ್ಲಿ , ಇದನ್ನು ಖಂಡಿಸಿ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಸ್ಥಗಿತಗೊಂಡಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲ್ವೇ ಸಂಚಾರವನ್ನು ಪುನರಾರಂಭಿಸಲು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಂದ ನಾಳೆ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ನಾಳೆ ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಮತ್ತೆ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲ್ವೇ ಸಂಚಾರವನ್ನು ಪುನರಾರಂಭಿಸಬೇಕೆಂದು ಈ ಪ್ರತಿಭಟನೆ ಮಾಡಲಾಗುತ್ತಿದೆ.
- Advertisement -