Wednesday, May 15, 2024
Homeಕರಾವಳಿಸುಬ್ರಹ್ಮಣ್ಯ - ಮಂಗಳೂರು ಪ್ಯಾಸೆಂಜರ್ ರೈಲನ್ನು ಪುನರಾರಂಭಿಸಲು ಆಗ್ರಹಿಸಿ ನಾಳೆ ಪ್ರತಿಭಟನೆ !

ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲನ್ನು ಪುನರಾರಂಭಿಸಲು ಆಗ್ರಹಿಸಿ ನಾಳೆ ಪ್ರತಿಭಟನೆ !

spot_img
- Advertisement -
- Advertisement -

ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು ಸಂಚಾರ ಸ್ಥಗಿತದಿಂದ ಪುತ್ತೂರು , ಮಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುವ ಅನೇಕ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ.

ಈ ನಿಟ್ಟಿನಲ್ಲಿ , ಇದನ್ನು ಖಂಡಿಸಿ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಸ್ಥಗಿತಗೊಂಡಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲ್ವೇ ಸಂಚಾರವನ್ನು ಪುನರಾರಂಭಿಸಲು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಂದ ನಾಳೆ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ನಾಳೆ ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಮತ್ತೆ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲ್ವೇ ಸಂಚಾರವನ್ನು ಪುನರಾರಂಭಿಸಬೇಕೆಂದು ಈ ಪ್ರತಿಭಟನೆ ಮಾಡಲಾಗುತ್ತಿದೆ.

- Advertisement -
spot_img

Latest News

error: Content is protected !!