- Advertisement -
- Advertisement -
ಪುಂಜಾಲಕಟ್ಟೆ: ರಾಜಕಾರಣಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ವಾಮದಪದವು ನಿವಾಸಿಯೊಬ್ಬನಿಗೆ ಬಂಟ್ವಾಳ ತಾಲೂಕು ದಂಡಾಧಿಕಾರಿ ಡಾ. ಸ್ಮಿತಾರಾಮು ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.
ವಾಮದಪದವಿನ ಪದ್ಮನಾಭ ಸಾವಂತ್ ನ್ಯಾಯಾಂಗ ಬಂಧನಕ್ಕೊಳಗಾದವನು. ಕಳೆದ ಫೆಬ್ರವರಿಯಲ್ಲೇ ಈತ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಮಾಜದಲ್ಲಿ ಸ್ವಾಸ್ಥ್ಯ ಕೆಡಿಸುತ್ತಿದ್ದ ಎಂಬ ಆರೋಪದಲ್ಲಿ ಇನ್ಮುಂದೆ ಯಾವುದೇ ಪೋಸ್ಟ್ ಗಳನ್ನು ಹಾಕದಂತೆ ಮುಚ್ಚಳಿಕೆ ಬರೆಸುವಂತೆ ಪುಂಜಾಲಕಟ್ಟೆ ಎಸ್.ಐ.ಸುತೇಶ್ ತಹಶೀಲ್ದಾರ್ ಅವರಿಗೆ ಪಿ.ಎ.ಅರ್.ಸಲ್ಲಿಸಿದ್ದರು. ಆದರೆ ಈತ ಇದನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಈತನಿಗೆ 5 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
- Advertisement -