- Advertisement -
![]()
- Advertisement -
ಉಡುಪಿ; ಫಾಜಿಲ್ ಹತ್ಯೆಯ ಆರೋಪಿಗಳನ್ನು ಬೆಂಬಲಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಬೈಂದೂರಿನ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಾಗಿದೆ.
ಬೈಂದೂರಿನ ಲಕ್ಷ್ಮೀಕಾಂತ ಎಂಬ ಫೇಸ್ ಬುಕ್ ಪ್ರೊಫೈಲ್ ಹೊಂದಿರುವ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್ ಮಾಡಿದಾತ. ಈತ ತನ್ನ ಫೇಸ್ ಬುಕ್ ಖಾತೆಯಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಹೀರೋ ಎಂದು ಬಿಂಬಿಸಿ ಪ್ರಚೋದನಾಕಾರಿ ಶೀರ್ಷಿಕೆ ನೀಡಿ ಪೋಸ್ಟ್ ಮಾಡಿದ್ದ. ಈ ಕುರಿತು ಉಡುಪಿ ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಲಕ್ಷ್ಮೀಕಾಂತ್ ವಿರುದ್ದ ಪ್ರಕರಣ ದಾಖಲಾಗಿದೆ.
- Advertisement -


