Friday, June 27, 2025
Homeಕರಾವಳಿಕಡಬ; ಕಾಡಾನೆ ಹಿಡಿದು ಹೋಗುವಾಗ ಅರಣ್ಯಾಧಿಕಾರಿಗಳು ಹಾಗೂ ಪೊಲೀಸ್ ಜೀಪ್ ಗೆ ಹಾನಿ; ಓರ್ವನನ್ನು ವಶಕ್ಕೆ...

ಕಡಬ; ಕಾಡಾನೆ ಹಿಡಿದು ಹೋಗುವಾಗ ಅರಣ್ಯಾಧಿಕಾರಿಗಳು ಹಾಗೂ ಪೊಲೀಸ್ ಜೀಪ್ ಗೆ ಹಾನಿ; ಓರ್ವನನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ಕಡಬ; ನರಹಂತಕ ಆನೆಯನ್ನು ಸೆರೆ ಹಿಡಿದು ತೆರಳುವ ವೇಳೆ ಸಾರ್ವಜನಿಕರು ಉಳಿದ ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಆಗ್ರಹಿಸಿ ಅರಣ್ಯ ಇಲಾಖೆ ಹಾಗೂ ಪೊಲೀಸ್ ಜೀಪ್ ಗೆ ಹಾನಿಗೈದಿರುವ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ನರಹಂತಕ ಆನೆಯನ್ನು ಸೆರೆ ಹಿಡಿದು ಬಳಿಕ ಅದನ್ನು ಸ್ಥಳಾಂತರಿಸಿದ ನಂತರ ಉಳಿದ ಆನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರಿಸುವುದಾಗಿ ಅಧಿಕಾರಿಗಳು ಸಾರ್ವಜನಿಕರಿಗೆ ಹೇಳಿದ್ದಾರೆ. ಸಾರ್ವಜನಿಕರು ಇದಕ್ಕೆ ಒಪ್ಪದೇ ಜನರು ಅಧಿಕಾರಿಗಳ ಜೊತೆಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಇದರಿಂದ  ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.  ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಯಾರೋ ಕಿಡಿಗೇಡಿಗಳು ಇಲಾಖೆಯ ವಾಹನಗಳಿಗೆ ಹಾನಿ ಮಾಡಿ ಅಧಿಕಾರಿಗಳಿಗೆ ಹಲ್ಲೆಗೈದಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ನಿನ್ನೆ ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಿ ಸೆರೆ ಹಿಡಿಯಲಾಗಿತ್ತು. ಹೀಗೆ ಆನೆಯನ್ನು ಹಿಡಿದು ತೆರಳುತ್ತಿದ್ದಾಗ “ನಮ್ಮ ಗ್ರಾಮದ ಕಾಡಿನ ಭಾಗದಲ್ಲಿ ಒಂದಲ್ಲ, ಇಂಥ ಹಲವು ಆನೆಗಳಿವೆ. ಅವೆಲ್ಲವನ್ನೂ ಸೆರೆ ಹಿಡಿಯಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.“ಕಾರ್ಯಾಚರಣೆ ನಿಲ್ಲಿಸಿಲ್ಲ, ನಾಳೆ ಬರುತ್ತೇವೆ” ಎಂದು ಹೇಳಿದರೂ ಕೇಳದೇ ಗ್ರಾಮಸ್ಥರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಎರಡು ಪೊಲೀಸ್ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬೀಝಾ ಗಾಡಿಗಳು ಜಖಂಗೊಂಡಿವೆ. ಡಿವೈಎಸ್ಪಿ ಅವರ ವಾಹನ ಸೇರಿ ಅರಣ್ಯ ಇಲಾಖೆಗೆ ಸೇರಿದ ವಾಹನಗಳ ಗಾಜು ಪುಡಿ ಪುಡಿಯಾಗಿವೆ.

- Advertisement -
spot_img

Latest News

error: Content is protected !!