Wednesday, April 24, 2024
Homeಕರಾವಳಿಪಂಪ್‌ವೆಲ್ ಮೇಲ್ಸೇತುವೆ ಬಿರುಕು: ಕಾಮಗಾರಿ ತನಿಖೆಗೆ ಐವನ್ ಡಿಸೋಜ ಆಗ್ರಹ

ಪಂಪ್‌ವೆಲ್ ಮೇಲ್ಸೇತುವೆ ಬಿರುಕು: ಕಾಮಗಾರಿ ತನಿಖೆಗೆ ಐವನ್ ಡಿಸೋಜ ಆಗ್ರಹ

spot_img
- Advertisement -
- Advertisement -

ಮಂಗಳೂರು: ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಈಗಾಗಲೇ ಅಲ್ಲಲ್ಲಿ ಬಿರುಕು ಬಿಟ್ಟಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಗ್ರಹಿಸಿದ್ದಾರೆ.
3 ತಿಂಗಳ ಹಿಂದೆಯಷ್ಟೇ ಕಾಮಗಾರಿ ಸಂಪೂರ್ಣಗೊಂಡು ಉದ್ಘಾಟನೆಗೊಂಡ ಮೇಲ್ಸೇತುವೆ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಕಳಪೆ ಕಾಮಗಾರಿಯಿಂದ ಜನರ ತೆರಿಗೆ ಹಣವನ್ನು ಪೋಲು ಮಾಡಲಾಗಿದೆ ಎಂದು ಅವರು ಆರೋಪಿಸಿದರು.ದ.ಕ. ಜಿಲ್ಲಾ ಸಂಸದರು, ಬಿಜೆಪಿ ಶಾಸಕರು ಈ ಕಾಮಗಾರಿ ಬಗ್ಗೆ ಬಹಳ ಸಂಭ್ರಮ ಆಚರಿಸಿದ್ದರು.

ನಿರ್ಮಾಣಕ್ಕೆ 10 ವರ್ಷಗಳ ಕಾಲ ತೆಗೆದುಕೊಂಡ ಈ ಕಾಮಗಾರಿಗೆ ತಗುಲಿದ ವೆಚ್ಚ ಪಾವತಿ ಮಾಡಿದ ಹಣ ಮತ್ತು ಕಳಪೆ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಕೂಡಲೇ ತನಿಖೆಗೆ ಆದೇಶಿಸಬೇಕೆಂದು ಲೋಕೋಪಯೋಗಿ ಇಲಾಖೆ ಮತ್ತು ಕೇಂದ್ರ ಹೆದ್ದಾರಿ ಇಲಾಖೆಗೆ ಐವನ್ ಡಿಸೋಜ ಆಗ್ರಹಿಸಿದ್ದಾರೆ.

ಈ ಬಗ್ಗೆ ಅನೇಕ ಬಾರಿ ಇಲಾಖೆಯ ಗಮನಕ್ಕೆ ತಂದಿದ್ದರೂ ಕ್ರಮ ಕೈಗೊಳ್ಳಲಿಲ್ಲ.‌ 10 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಈ ಕಾಮಗಾರಿಯಿಂದ ಸರಕಾರಕ್ಕೆ ಮತ್ತು ಇಲಾಖೆಗೆ ತುಂಬಾ ನಷ್ಟ ಉಂಟಾಗಿದೆ. ಈ ಜವಾಬ್ದಾರಿಯನ್ನು ಲೋಕಸಭಾ ಸದಸ್ಯರೇ ವಹಿಸಿಕೊಳ್ಳಬೇಕು. ಕಳಪೆ ಕಾಮಗಾರಿ ನಡೆದ ಸ್ಥಳವು ತೀರಾ ಅಪಾಯಕಾರಿ ಅಂಚಿನಲ್ಲಿದ್ದು, ಈ ಬಗ್ಗೆ ಸುರಕ್ಷತಾ ದೃಷ್ಟಿಯಿಂದ ಕ್ರಮ ವಹಿಸಬೇಕು. ವಾಹನ ಸಂಚಾರಕ್ಕೆ ಅಪಾಯ ಇರುವುದರಿಂದ ಇಲಾಖೆ ಕೂಡಲೇ ತಾಂತ್ರಿಕ ವರದಿಯನ್ನು ತೆಗೆದುಕೊಳ್ಳಬೇಕು. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಆಶಿತ್ ಪಿರೇರಾ, ಜೇಮ್ಸ್ ಪ್ರವೀಣ್, ಬಾಸ್ಕರ್ ರಾವ್, ಶ್ರೀಧರ್ ಶೆಟ್ಟಿ ಕಡೆಕಾರ್, ಹಬಿಬುಲ್ಲಾ, ಬಾಜಿಲ್, ಗುರುರಾಜ್, ರಘುರಾಜ್ ಮುಂತಾದವರು ಉಪಸ್ಥಿತರಿದ್ದರು. 

- Advertisement -
spot_img

Latest News

error: Content is protected !!