Tuesday, May 14, 2024
Homeತಾಜಾ ಸುದ್ದಿಚಕ್ರವರ್ತಿ ಸೂಲಿಬೆಲೆ ವಿರುದ್ಧ ರೊಚ್ಚಿಗೆದ್ದ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು: ಕ್ಷಮೆ ಕೇಳಿದ ಸೂಲಿಬೆಲೆ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ರೊಚ್ಚಿಗೆದ್ದ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು: ಕ್ಷಮೆ ಕೇಳಿದ ಸೂಲಿಬೆಲೆ

spot_img
- Advertisement -
- Advertisement -

ಅಪ್ಪು ನಿಧನದ ನೋವು ಇನ್ನೂ ಮಾಸಿಲ್ಲ. ಅಭಿಮಾನಿಗಳ ಪಾಲಿಗೆ ಅಪ್ಪು ದೇವರಾಗಿದ್ದಾರೆ. ಆದ್ರೆ ಇದೀಗ ಚಕ್ರವರ್ತಿ ಸೂಲಿಬೆಲೆ ಅವರ ವಿವಾದಾತ್ಮಕ ಟ್ವೀಟ್ ವೊಂದು ಅಪ್ಪು ಅಭಿಮಾಗನಿಳ ಆಕ್ರೋಶಕ್ಕೆ ಕಾರಣವಾಗಿದೆ.

ಇಂದು ಬೆಳಗ್ಗೆ 8:46ಕ್ಕೆ ಚಕ್ರವರ್ತಿ ಸೂಲಿಬೆಲೆ ಅವರು ಒಂದು ಟ್ವೀಟ್ ಮಾಡಿದ್ದರು. ಆ ಟ್ವೀಟ್‌ನಲ್ಲಿ ‘ಪುನೀತ್ ರಾಜ್‌ಕುಮಾರ್’ ಅವರ ಹೆಸರನ್ನ ಚಕ್ರವರ್ತಿ ಸೂಲಿಬೆಲೆ ಉಲ್ಲೇಖಿಸಿಲ್ಲ. ಆದ್ರೆ ಬಿಜೆಪಿ ಸರಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸುವ ಭರದಲ್ಲಿ ಪುನೀತ್ ರಾಜ್ ಕುಮಾರ್ ನಿಧನವನ್ನು ಅಣಕಿಸುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದ್ರಿಂದ ಅಪ್ಪು ಅಭಿಮಾನಿಗಳು ಕೆರಳಿದ್ದಾರೆ.

ತಮ್ಮದೇ ಪಕ್ಷದ ಶಾಸಕರ ಫೈಲ್ಸ್ ಗೆ ಸಹಿ ಮಾಡಲು ಮುಖ್ಯಮಂತ್ರಿಗಳಿಗೆ ಸಮಯದ ಅಭಾವವಿದೆ ಎಂದು ಪಕ್ಷದವರೇ ಟೀಕಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳಿಗೆ ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಮಯವಿದೆ. ಪ್ರಿಮಿಯರ್ ಶೋ ಅಟೆಂಡ್ ಮಾಡಿ, ಸಿನಿಮಾ ನೋಡಿ ಕಣ್ಣೀರು ಹಾಕಲು ಸಮಯವಿದೆ. ನಟನೊಬ್ಬನು ನಿಧನರಾದಾಗ ಮೂರು ದಿನಗಳ ಕಾಲ ಸಮಯ ಕೊಟ್ಟಿದ್ದಾರೆ. ಮುಂದೆ ವಿಕ್ರಾಂತ್ ರೋಣ ಸಿನಿಮಾವನ್ನೂ ಅವರು ನೋಡಲಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ. ಇದು ಅಪ್ಪು ಅಭಿಮಾನಿಗಳನ್ನು ಕೆರಳಿಸಿತ್ತು. ಕೂಡಲೇ ಎಚ್ಚೆತ್ತುಕೊಂಡ ಸೂಲಿಬೆಲೆ ಅವರು ಕ್ಷಮೆ ಕೇಳಿದ್ದಾರೆ.

- Advertisement -
spot_img

Latest News

error: Content is protected !!