Sunday, June 7, 2026
Homeತಾಜಾ ಸುದ್ದಿನಾನು ಜೀವಂತವಾಗಿ ಬಂದಿದ್ದೇನೆ ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ- ಪಂಜಾಬ್ ಸಿಎಂ ಗೆ ಪ್ರಧಾನಿ ಟಾಂಗ್

ನಾನು ಜೀವಂತವಾಗಿ ಬಂದಿದ್ದೇನೆ ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ- ಪಂಜಾಬ್ ಸಿಎಂ ಗೆ ಪ್ರಧಾನಿ ಟಾಂಗ್

- Advertisement -
- Advertisement -

ನವದೆಹಲಿ: ಬಟಿಂಡಾ ವಿಮಾನ ನಿಲ್ದಾಣಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳಿಗೆ, “ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ” ಎಂದಿದ್ದಾರೆ.

ಬುಧವಾರ ಪಂಜಾಬ್‌ನ ಫಿರೋಜ್‌ಪುರದಲ್ಲಿ ಯೋಜನೆಗಳ ಶಂಕುಸ್ಥಾಪನೆಗೆ ತೆರಳುತ್ತಿದ್ದ ವೇಳೆ ಫ್ಲೈಓವರ್‌‌ ಬಳಿಯೇ ಪ್ರಧಾನಿ ಬೆಂಗಾವಲು ಪಡೆ ವಾಹನವನ್ನು ಪ್ರತಿಭಟನಾಕಾರರು ತಡೆದಿದ್ದರು. ಈ ಕಾರಣದಿಂದ ಪ್ರಧಾನಿ ಅವರ ಕಾರು ಸುಮಾರು 15-20 ನಿಮಿಷಗಳ ಕಾಲ ನಿಲ್ಲುವಂತಾಗಿತ್ತು. ಇದು ಗಂಭೀರವಾದ ಭದ್ರತಾ ಲೋಪ ಎಂದು ಕೇಂದ್ರ ಗೃಹ ಸಚಿವಾಲಯ ಆರೋಪಿಸಿದೆ.

ಪಂಜಾಬ್‌ನಲ್ಲಿ ಪ್ರಧಾನಿ ಮೋದಿ ಅವರ ಭದ್ರತೆಗೆ ಧಕ್ಕೆಯಾಗಿರುವ ಬಗ್ಗೆ ಕಾಂಗ್ರೆಸ್‌‌ ನಾಯಕರು ಸಂಭ್ರಮಿಸುತ್ತಿದ್ದಾರೆ ಎನ್ನಲಾಗಿದೆ. ಭದ್ರತಾ ಲೋಪದ ಬಳಿಕ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌‌‌ ಬಿ ವಿ ಟ್ವೀಟ್‌ ಮಾಡಿದ್ದು, “ಹೇಗಿದೆ ಜೋಶ್‌?” ಎಂದು ಕೇಳಿದ್ದಾರೆ.

ಬುಧವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಟಿಂಡಾಕ್ಕೆ ಬಂದಿಳಿದಿದ್ದರು. ಅಲ್ಲಿಂದ ಅವರು ಹೆಲಿಕಾಪ್ಟರ್ ಮೂಲಕ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ತೆರಳಬೇಕಾಗಿತ್ತು. ಸುಧಾರಿತ ಹವಾಮಾನ ಇಲ್ಲದ ಕಾರಣ, ಅವರು ರಸ್ತೆ ಮೂಲಕ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ತೀರ್ಮಾನಿಸಲಾಯಿತು. ಇದಕ್ಕೆ 2 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಡಿಜಿಪಿ ಪಂಜಾಬ್‌ ಪೊಲೀಸರು ಅವಶ್ಯಕವಾದ ಭದ್ರತಾ ವ್ಯವಸ್ಥೆಗಳನ್ನು ದೃಢೀಕರಿಸಿದ ನಂತರ ಅವರು ರಸ್ತೆ ಮೂಲಕ ಪ್ರಯಾಣಿಸಲು ಮುಂದಾದರು.

ಹುಸೇನಿವಾಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿ.ಮೀ ದೂರದಲ್ಲಿ, ಪ್ರಧಾನಮಂತ್ರಿಯವರ ಬೆಂಗಾವಲು ಪಡೆ ಫ್ಲೈಓವರ್ ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಧಾನಿ 15-20 ನಿಮಿಷಗಳ ಕಾಲ ಫ್ಲೈಓವರ್‌ನಲ್ಲಿ ಸಿಲುಕಿಕೊಂಡಿದ್ದರು. ಇದು ಪ್ರಧಾನ ಮಂತ್ರಿಯವರ ಭದ್ರತೆಯಲ್ಲಿ ಒಂದು ದೊಡ್ಡ ಲೋಪವಾಗಿತ್ತು. ಈ ಭದ್ರತಾ ಲೋಪದ ಬಳಿಕ ಬಟಿಂಡಾ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ತೀರ್ಮಾನಿಸಲಾಗಿತ್ತು.

- Advertisement -

Latest News

error: Content is protected !!