- Advertisement -
- Advertisement -
‘ಪುಷ್ಪ 2’ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರವನ್ನು ಅಲ್ಲು ಅರವಿಂದ್ ತಂದೆ ಘೋಷಿಸಿದ್ದಾರೆ.
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಪ್ರೀಮಿಯರ್ ಶೋ ಡಿ.4ರಂದು ನಡೆದಿದ್ದು, ಈ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ರೇವತಿ ಮೃತರಾಗಿದ್ದು, ಆಕೆಯ ಪುತ್ರ ಶ್ರೀಜಾ ಕೂಡ ತೀವ್ರ ಗಂಭೀರ ಸ್ಥಿತಿಯಲ್ಲಿದ್ದಾರೆ. ಈಗಾಗಲೇ ಅಲ್ಲು ಅರ್ಜುನ್ ತಂದೆ ಕುಟುಂಬಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ಈ ಹಿಂದೆ 25 ಲಕ್ಷ ರೂ. ಕೊಡೋದಾಗಿ ತಿಳಿಸಿದ್ದರು. ಆದರೆ ಈಗ ಮೃತಪಟ್ಟ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ನೀಡುವುದಾಗಿ ಅಲ್ಲು ಅರವಿಂದ್ ತಿಳಿಸಿದ್ದಾರೆ.
ಅಲ್ಲು ಅರ್ಜುನ್ ಕಡೆಯಿಂದ 1 ಕೋಟಿ ರೂ. ಜೊತೆಗೆ ‘ಪುಷ್ಪ 2’ ನಿರ್ಮಾಪಕರು ಮತ್ತು ನಿರ್ದೇಶಕ ಸುಕುಮಾರ್ ಕಡೆಯಿಂದ 1 ಕೋಟಿ ರೂ.ವನ್ನು ಮೃತ ಮಹಿಳೆ ಕುಟುಂಬಕ್ಕೆ ಕೊಡಲು ನಿರ್ಧರಿಸಿದ್ದಾರೆ.
- Advertisement -