- Advertisement -
- Advertisement -
ಉಡುಪಿ: 2020ನೇ ಸಾಲಿನ ಪುಸ್ತಕ ಸೊಗಸು/ ಮುದ್ರಣ ಸೊಗಸು ಬಹುಮಾನಕ್ಕೆ ಉಡುಪಿಯ ಡಾ.ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲ್ಪಡುವ ಬಹುಮಾನದ ಆಯ್ಕೆ ಇಂದು ಬೆಂಗಳೂರಿನಲ್ಲಿ ನಡೆದಿದೆ. ತಲ್ಲೂರು ಶಿವರಾಮ ಶೆಟ್ಟಿ ಅವರ ಕಲಾ ಸಂಚಯ ಕೃತಿಗೆ ಪುಸ್ತಕ ಸೊಗಸು ಮೂರನೇ ಬಹುಮಾನ ಲಭಿಸಿದೆ.
ಬಹುಮಾನದ ಮೊತ್ತ 10 ಸಾವಿರ ರೂಪಾಯಿಗಳನ್ನು ಒಳಗೊಂಡಿದೆ. ಕಲಾ ಸಂಚಯ ಕೃತಿಯನ್ನು ಉಡುಪಿಯ ತಲ್ಲೂರು ಫ್ಯಾಮಿಲಿ ಟ್ರಸ್ಟ್(ರಿ) ಪ್ರಕಾಶನ ಸಂಸ್ಥೆ ಪ್ರಕಟಿಸಿತ್ತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ನಡೆದ ಆಯ್ಕೆ ಸಮಿತಿ ಸಭೆ ನಡೆಯಲ್ಪಟ್ಟಿತ್ತು.
- Advertisement -