Saturday, June 28, 2025
Homeಕರಾವಳಿಉಡುಪಿಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಗಳಿಗೆ ಕೊರೊನಾ ಪಾಸಿಟಿವ್

ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಗಳಿಗೆ ಕೊರೊನಾ ಪಾಸಿಟಿವ್

spot_img
- Advertisement -
- Advertisement -

ಉಡುಪಿ : ಕೃಷ್ಣನಗರಿಯಲ್ಲಿ ಕೊರೊನಾ ಆರ್ಭಟ ಜೋರಾಗುತ್ತಲೇ ಇದೆ. ಕಳೆದೊಂದು ವಾರದಲ್ಲಿ ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆ ಏರಕೆಯಾಗುತ್ತಲೇ ಇದೆ. ಈ ಕೋವಿಡ್ ಸೋಂಕು ಯಾರನ್ನು ಬಿಡಲ್ಲ ಅಂತಾ ನಿರ್ಧರಿಸಿದಂತಿದೆ. ಇದೀಗ ಉಡುಪಿಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಗಳಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ.

ಸದ್ಯ ಶ್ರೀಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳು ಆರೋಗ್ಯವಾಗಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗುತ್ತಿದೆ. ಇನ್ನು ಸ್ವಾಮೀಜಿಗಳು ಶೀಘ್ರ ಗುಣಮುಖರಾಗುವಂತೆ ಭಕ್ತರು ಪ್ರಾರ್ಥಿಸುತ್ತಿದ್ದಾರೆ. ಜಿಲ್ಲೆಯಲ್ಲಿ ನಿರಂತರವಾಗಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ.

- Advertisement -
spot_img

Latest News

error: Content is protected !!