- Advertisement -
![]()
- Advertisement -
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿ 2018 ರಲ್ಲಿ ಜಾಮೀನು ಪಡೆದ ನಂತರ ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮಹಮ್ಮದ್ ಹನೀಫ್ (55), ವಾಸ:ಸೋಮವಾರ ಪೇಟೆ, ಕೊಡಗು ಮಡಿಕೇರಿ ಎಂಬಾತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿದೆ.
ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 269 ಬಿ.ಎನ್ ಎಸ್ ರಂತೆ ಪ್ರಕರಣ ದಾಖಲು ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
- Advertisement -


