- Advertisement -
- Advertisement -
ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಹಂತುವಾನಿ ಗ್ರಾಮದಲ್ಲಿ ನಾಯಿ ನುಂಗಿ ನರಳುತ್ತಿದ್ದ ಬೃಹತ್ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. 15 ಅಡಿ ಉದ್ದ, 60 ಕೆ.ಜಿ. ತೂಕವಿದ್ದ ಹೆಬ್ಬಾವು ಶ್ರೀಮತಿ ಎಂಬವರ ಮನೆ ಪಕ್ಕ ನಾಯಿಯನ್ನು ನುಂಗಿ ಚಲಿಸಲಾಗದೇ ಒದ್ದಾಡುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಉರಗತಜ್ಞ ಹರೀಂದ್ರ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ.
ಅರಣ್ಯ ಅಧಿಕಾರಿ ರಾಘವೇಂದ್ರ ಸಮ್ಮುಖದಲ್ಲಿ ಹೆಬ್ಬಾವು ರಕ್ಷಣಾ ಕಾರ್ಯ ನಡೆದಿದೆ. ಹಾವನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.
- Advertisement -