ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲೀಗ ರಾಜ್ಯ ಸರಕಾರ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆಯನ್ನು ಮಾಡಲಾಗಿದ್ದು, ಹೊರ ರಾಜ್ಯಗಳಿಂದ ಬಂದವರಿಗೆ ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್ ಮಾಡಲು ಸರಕಾರ ತೀರ್ಮಾನಿಸಿದೆ.
ಇತ್ತೀಚೆಗೆ ಕ್ವಾರಂಟೈನ್ ನಿಯಮ ಸಡಿಲಗೊಳಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರ 7 ದಿನ ಸಾಂಸ್ಥಿಕ ಕ್ವಾರಂಟೈನ್ ಮತ್ತು 7 ದಿನ ಹೋಂ ಕ್ವಾರಂಟೈನ್ಗೆ ಸೂಚಿಸಿತ್ತು. ಇತರ ರಾಜ್ಯದಿಂದ ಬರುವವರಿಗೆ 14 ದಿನಗಳ ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿತ್ತು. ಒಂದು ವೇಳೆ ದೊಡ್ಡ ಕುಟುಂಬವಿದ್ದು, ಮನೆ ಚಿಕ್ಕದಾಗಿದ್ದರೆ, ಕೊಳಗೇರಿ ಅಥವಾ ಕಿಕ್ಕಿರಿದ ಪ್ರದೇಶಗಳ ನಿವಾಸಿಯಾಗಿದ್ದು ಮನೆಯಲ್ಲಿ ಪ್ರತ್ಯೇಕ ಕ್ವಾರಂಟೈನ್ ವ್ಯವಸ್ಥೆ ಸಾಧ್ಯವಾಗದವರನ್ನು ಮಾತ್ರ ಸಾಂಸ್ಥಿಕ ಕ್ವಾರಂಟೈನ್ಗೆ ಸೂಚಿಸಲಾಗುತ್ತಿತ್ತು. ಈಗ ಹೊರ ರಾಜ್ಯದಿಂದ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.
ಕೇವಲ ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರವಲ್ಲ, ಯಾವುದೇ ರಾಜ್ಯದಿಂದ ಬಂದವರು ಕೂಡ ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಪಡಲೇ ಬೇಕು ಎಂದು ರಾಜ್ಯ ಸರಕಾರ ಹೇಳಿದೆ. ಕ್ವಾರಂಟೈನ್ ನಿಯಮಗಳಲ್ಲಿ ಬದಲಾವಣೆ ಮಾಡುವುದಕ್ಕೆ ಸಿಎಂ ಯಡಿಯೂರಪ್ಪ ಒಪ್ಪಿಗೆಯನ್ನು ನೀಡಿದ್ದು, ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.
ಕ್ವಾರಂಟೈನ್ ನಿಯಮದಲ್ಲಿ ಮತ್ತೆ ಬದಲಾವಣೆ: 14 ದಿನದ ಖಡಕ್ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ
- Advertisement -
- Advertisement -
- Advertisement -