ಉಡುಪಿ: ಇಂದು ಜಿಲ್ಲಾಧಿಕಾರಿಗಳಿಗೆ ಪತ್ರಬರೆದು ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ರಾಜಿನಾಮೆ ಘೋಷಿಸಿದ್ದಾರೆ.
ಈ ಬಗ್ಗೆ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಇದರ ಕುರಿತು ಮಾಹಿತಿ ನೀಡಿದ್ದಾರೆ, “ಆತ್ಮೀಯರೇ ಭಾರತೀಯ ಜನತಾ ಪಕ್ಷದ ಆದೇಶದಂತೆ ಒಬ್ಬ ಅತ್ಯಂತ ಸಾಮಾನ್ಯ ಪಕ್ಷದ ಕಾರ್ಯಕರ್ತನಾಗಿ 18 ತಿಂಗಳು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ . ಸಾಧ್ಯವಾದಷ್ಟು ಮಟ್ಟಿಗೆ ಹೊಸತನವನ್ನು ನೀಡಿ ಪಾರದರ್ಶಕತೆ ಯಿಂದ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ನಮ್ಮ ಆಡಳಿತ ಕೆಲಸ ಮಾಡಿದೆ . ಇದೀಗ ಪಕ್ಷದ ಹಿರಿಯರ ಆದೇಶದಂತೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಇದರ ಜೊತೆಗೆ ತಮ್ಮ ಕಾರ್ಯಾದ ಅವಧಿಯಲ್ಲಿ ಸಹಕರಿಸಿದ ಉಡುಪಿ ಶಾಸಕ ರಘುಪತಿ ಭಟ್ ಮತ್ತು ಕಾಪು ಶಾಸಕ ಲಾಲಾಜಿ ಮೆಂಡನ್ ಅವರಿಗೆ ಹಾಗೂ ಪ್ರಾಧಿಕಾರದ ಗೌರವಾನ್ವಿತ ಸದಸ್ಯರು , ಸಿಬ್ಬಂದಿ ವರ್ಗ , ಜನತೆಯ ಸೇವೆ ಅವಕಾಶ ನೀಡಿದ ಪಕ್ಷದ ಹಿರಿಯರಿಗೆ ಮತ್ತು ಜನತೆಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ .