- Advertisement -
- Advertisement -
ಬೆಂಗಳೂರು: ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕಗೊಂಡಿದ್ದಾರೆ.
ಸಭಾಪತಿ ಆಗಿದ್ದ ಬಸವರಾಜ ಹೊರಟ್ಟಿ ನಿನ್ನೆ ರಾಜೀನಾಮೆ ನೀಡಿದ್ದ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಮಲ್ಕಾಪುರೆ ನೇಮಕ ಮಾಡಲಾಗಿದೆ.

ಮೂಲತ: ಬೀದರ್ ಜಿಲ್ಲೆಯವರಾಗಿರುವ ರಘುನಾಥ್ ರಾವ್ ಮಲ್ಕಾಪುರೆ ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಇಂದು ಹಂಗಾಮಿ ಸಭಾಪತಿ ಸ್ಥಾನಕ್ಕೆ ಮಲ್ಕಾಪುರೆ ಅವರ ಹೆಸರನ್ನು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.
- Advertisement -