- Advertisement -
- Advertisement -
ಬೆಂಗಳೂರು:ಇಂದು ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ರಾಗಿಣಿ, ಇಂದು ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಿದ್ದರು. ಅವರು ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ನಾನು ಕನ್ನಡ ಚಿತ್ರರಂಗಕ್ಕೆ ಬಂದು 12 ವರ್ಷ ಆಗಿದೆ. ನಾನೇನು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಪ್ರಕರಣದಲ್ಲಿ ತನ್ನನ್ನು ಬಲಿಪಶು ಮಾಡಿದ್ದಾರೆ ನಾನೇನು ಎಂದು ಜನಕ್ಕೆ ಗೊತ್ತು ಎಂದು ನಟಿ ರಾಗಿಣಿ ಪರೋಕ್ಷವಾಗಿ ಹೇಳಿದ್ದಾರೆ.
ಬೇರೆಯವರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ ಎಂದ ಅವರು ನಾನು ಈ ಕ್ಷಣಕ್ಕೂ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಹೊಂದಿದ್ದೇನೆ. ನಾನು ತಪ್ಪು ಮಾಡಿಲ್ಲ ಎಂದು ಮತ್ತೆ ವಿವರಣೆ ನಿಡುವ ಅಗತ್ಯವಿಲ್ಲ.ಏನಿದ್ದರೂ ಕೋರ್ಟ್ನಲ್ಲಿ ನೋಡಿಕೊಳ್ಳುವೆ ಎಂದರು.
- Advertisement -