Thursday, June 26, 2025
Homeಕರಾವಳಿಮಂಗಳೂರುಬಂಟ್ವಾಳ; ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ;   ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬಂಟ್ವಾಳ; ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ;   ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಬಂಟ್ವಾಳದ ಕುರಿಯ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ  ಅಬ್ದುಲ್ ರಹಿಮಾನ್ ಕೊಲೆ ಹಾಗೂ ಕಲಂದರ್ ಶಾಫಿ ಅವರ ಮೇಲೆ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು  ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಟ್ವಾಳದ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಮೇ.29 ರಂದು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳದ ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ (21), ಬಂಟ್ವಾಳದ ಅಮ್ಮುಂಜೆ ಗ್ರಾಮದ  ಶಿವಾಜಿ ನಗರ ನಿವಾಸಿ ಪೃಥ್ವಿರಾಜ್ (21), ಬಂಟ್ವಾಳದ ಅಮ್ಮುಂಜೆ ಗ್ರಾಮದ  ಶಿವಾಜಿ ನಗರ ನಿವಾಸಿ ಚಿಂತನ್ (19) ಬಂಧಿತ ಆರೋಪಿಗಳು. ಇನ್ನುಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

- Advertisement -
spot_img

Latest News

error: Content is protected !!