- Advertisement -
- Advertisement -
ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ನಡೆಸಿದ್ದರಿಂದಲೇ ದೇಶದಲ್ಲಿ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವಂತೆ ಆಯ್ತು ಎಂದರು.ಇಂದಿನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರಾಬೇಕೆಂದು ಎಲ್ಲರೂ ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ಹೊರತಾಗಿ ಬೇರಾರೂ ನಾಯಕರಿಲ್ಲ ಅಂತ ನಿರ್ಣಯಕ್ಕೆ ಬರಲಾಗಿದೆ ಎಂದರು.
- Advertisement -