Sunday, June 29, 2025
Homeತಾಜಾ ಸುದ್ದಿನಮಗೆ ನಾಚಿಕೆಯಾಗಬೇಕು : ಔರಂಗಾಬಾದ್ ರೈಲು ದುರಂತಕ್ಕೆ ರಾಹುಲ್ ಗಾಂಧಿ ಕಳವಳ

ನಮಗೆ ನಾಚಿಕೆಯಾಗಬೇಕು : ಔರಂಗಾಬಾದ್ ರೈಲು ದುರಂತಕ್ಕೆ ರಾಹುಲ್ ಗಾಂಧಿ ಕಳವಳ

spot_img
- Advertisement -
- Advertisement -

ನವದೆಹಲಿ: ಮೇ .8 ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಇಂದು ಮುಂಜಾನೆ 5 ಗಂಟೆ ವೇಳೆಗೆ ಗೂಡ್ಸ್​ ರೈಲು ಹರಿದು ಮಧ್ಯಪ್ರದೇಶದ 16 ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ .


ಕಾರ್ಮಿಕರು ಸಾವನ್ನಪ್ಪಿರುವ ವಿಷಯ ಕೇಳಿ ನನಗೆ ಆಘಾತವಾಯಿತು, ವಲಸೆ ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿರುವ ಅವರು ಈ ಪ್ರಕರಣದಿಂದ ನಮಗೆ ನಾಚಿಕೆಯಾಗಬೇಕು ಎಂದು ಹೇಳಿದ್ದಾರೆ.
ಮೃತರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಮಧ್ಯಪ್ರದೇಶ ಸರ್ಕಾರ 5 ಲಕ್ಷ ರೂ. ಪರಿಹಾರ ಧನ ಘೋಷಿಸಿದೆ.
ಲಾಕ್​ಡೌನ್​ನಿಂದ ಮಹಾರಾಷ್ಟ್ರದಲ್ಲಿ ಸಿಲುಕಿಕೊಂಡಿದ್ದ ಮಧ್ಯಪ್ರದೇಶದ ಕಾರ್ಮಿಕರು ರೈಲ್ವೆ ಹಳಿಯನ್ನು ಅನುಸರಿಸಿ ತಮ್ಮ ಊರಿಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಸುಸ್ತಾದ ಕಾರ್ಮಿಕರು ವಿಶ್ರಾಂತಿಗೆಂದು ನಿನ್ನೆ ರಾತ್ರಿ ಹಳಿಯ ಮೇಲೆ ಮಲಗಿದ್ದರು. ಇಂದು ಬೆಳಗ್ಗೆ ಜಾಲ್ನಾದಿಂದ ಔರಂಗಾಬಾದ್​ನತ್ತ ತೆರಳುತ್ತಿದ್ದ ಗೂಡ್ಸ್​ ರೈಲು ಹಳಿಯ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ 16 ಕಾರ್ಮಿಕರು ಸಾವನ್ನಪ್ಪಿದ್ದರು.

- Advertisement -
spot_img

Latest News

error: Content is protected !!