ಬೆಂಗಳೂರು: ಸಕಲೇಶಪುರ ಸಮೀಪ ರೈಲ್ವೇ ಹಳಿಗಳ ಮೇಲೆ ಬಿದ್ದ ಮಣ್ಣು ತೆರವು ಮಾಡಲಾಗಿದ್ದು ನಾಳೆಯಿಂದ ಮಂಗಳೂರು ಬೆಂಗಳೂರು ನಡುವೆ ರೈಲ್ವೇ ಸಂಚಾರ ಪುನರಾರಂಭವಾಗಲಿದೆ..
ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಮಾಹಿತಿ ಮಾಡಲಾಗಿದೆ. ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ದುರಸ್ಥಿ ಕಾರ್ಯ ಪೂರ್ಣವಾಗಿದೆ. ಹಳಿಯಲ್ಲಿದ್ದ ಎಲ್ಲಾ ಅಡೆತಡೆಗಳನ್ನು ತೆರವುಗೊಳಿಸಲಾಗಿದೆ ಮತ್ತು ಸಂಜೆ 4:45 ರವರೆಗೆ ಹಳಿ ಎಲ್ಲಾ ರೈಲು ಕಾರ್ಯಾಚರಣೆಗಳಿಗೆ ಸೂಕ್ತವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದು ತಿಳಿಸಿದೆ.
ನಾಳೆಯಿಂದ ಈ ಮಾರ್ಗದಲ್ಲಿ ಈ ರೈಲುಗಳ ಸಂಚಾರ ಪುನರಾರಂಭ
* ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್ಪ್ರೆಸ್
* ರೈಲು ಸಂಖ್ಯೆ 16595 ಕೆಎಸ್ಆರ್ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್
* ರೈಲು ಸಂಖ್ಯೆ 16596 ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16512 ಕಣ್ಣೂರು-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16515 ಯಶವಂತಪುರ-ಕಾರವಾರ ಎಕ್ಸ್ಪ್ರೆಸ್
* ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು