Friday, June 27, 2025
Homeಕರಾವಳಿಸಕಲೇಶಪುರ ಸಮೀಪ ರೈಲ್ವೇ ಹಳಿಗಳ ಮೇಲೆ ಬಿದ್ದ ಮಣ್ಣು ತೆರವು: ನಾಳೆಯಿಂದ ಮಂಗಳೂರು ಬೆಂಗಳೂರು ನಡುವೆ...

ಸಕಲೇಶಪುರ ಸಮೀಪ ರೈಲ್ವೇ ಹಳಿಗಳ ಮೇಲೆ ಬಿದ್ದ ಮಣ್ಣು ತೆರವು: ನಾಳೆಯಿಂದ ಮಂಗಳೂರು ಬೆಂಗಳೂರು ನಡುವೆ ರೈಲ್ವೇ ಸಂಚಾರ ಪುನರಾರಂಭ

spot_img
- Advertisement -
- Advertisement -

ಬೆಂಗಳೂರು: ಸಕಲೇಶಪುರ ಸಮೀಪ ರೈಲ್ವೇ ಹಳಿಗಳ ಮೇಲೆ ಬಿದ್ದ ಮಣ್ಣು ತೆರವು ಮಾಡಲಾಗಿದ್ದು ನಾಳೆಯಿಂದ ಮಂಗಳೂರು ಬೆಂಗಳೂರು ನಡುವೆ ರೈಲ್ವೇ ಸಂಚಾರ ಪುನರಾರಂಭವಾಗಲಿದೆ..

ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಮಾಹಿತಿ ಮಾಡಲಾಗಿದೆ. ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ದುರಸ್ಥಿ ಕಾರ್ಯ ಪೂರ್ಣವಾಗಿದೆ. ಹಳಿಯಲ್ಲಿದ್ದ ಎಲ್ಲಾ ಅಡೆತಡೆಗಳನ್ನು ತೆರವುಗೊಳಿಸಲಾಗಿದೆ ಮತ್ತು ಸಂಜೆ 4:45 ರವರೆಗೆ ಹಳಿ ಎಲ್ಲಾ ರೈಲು ಕಾರ್ಯಾಚರಣೆಗಳಿಗೆ ಸೂಕ್ತವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದು ತಿಳಿಸಿದೆ.

ನಾಳೆಯಿಂದ ಈ ಮಾರ್ಗದಲ್ಲಿ ಈ ರೈಲುಗಳ ಸಂಚಾರ ಪುನರಾರಂಭ

* ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16585 ಎಸ್‌ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್ಪ್ರೆಸ್
* ರೈಲು ಸಂಖ್ಯೆ 16595 ಕೆಎಸ್‌ಆರ್ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್
* ರೈಲು ಸಂಖ್ಯೆ 16596 ಕಾರವಾರ-ಕೆಎಸ್‌ಆರ್ ಬೆಂಗಳೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16511 ಕೆಎಸ್‌ಆರ್ ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16512 ಕಣ್ಣೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16515 ಯಶವಂತಪುರ-ಕಾರವಾರ ಎಕ್ಸ್ಪ್ರೆಸ್
* ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು

- Advertisement -
spot_img

Latest News

error: Content is protected !!