- Advertisement -
- Advertisement -
ಬೆಂಗಳೂರು: ಹವಾಮಾನ ಇಲಾಖೆ ಇಂದು ಕರ್ನಾಟಕದ ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಒಳನಾಡಿನ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಇಂದಿನಿಂದ ನ. 16ರವರೆಗೂ ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಚಳಿಯ ವಾತಾವರಣ ಇರಲಿದೆ.
- Advertisement -