ಬೆಳ್ತಂಗಡಿ: ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ ರಾಜೇಂದ್ರ ನಾಯ್ಕ್ ಪಕ್ಕಿದಕಲ ಇವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ಅಗಸ್ಟ್ 7 ರಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆಗಸ್ಟ್ 13 ರಂದು ಮನೆಗೆ ವಾಪಸ್ ಅಗಿ ಬೆಡ್ ರೆಸ್ಟ್ ನಲ್ಲಿದ್ದರು. ಮಂಗಳವಾರ ರಾತ್ರಿ 12 ಗಂಟೆಗೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ನಿಧನರಾಗಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತನ್ನನ್ನು ತಾನು ಗುರುತಿಸಿಕೊಂಡಿದ್ದ ಅವರು ಬೆಳ್ತಂಗಡಿಯ ಆಶಾ ಯಂಗ್ ಸ್ಟರ್ ಕ್ಲಬ್ ಸದಸ್ಯರಾಗಿ , ಜೆಸಿಐ ಸದಸ್ಯರಾಗಿ, ಮೇಲಂತಬೆಟ್ಟು ಬದಿನೆಡೆ ನಾಗಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹಾಗೂ ವಿವಿಧ ಯುವಕ ಮಂಡಲಗಳ ಸದಸ್ಯರಾಗಿ ಅದಲ್ಲದೇ ನಾಟಕ ಕಲಾವಿದರಾಗಿ ಗುರುತಿಸಿಕೊಂಡಿದ್ದರು.ಎಲ್ಲರೊಂದಿಗೆ ಆತ್ಮೀಯರಾಗಿ ಇರುತಿದ್ದ ಅವರು ಪತ್ನಿ ರೇಖಾ ಮತ್ತು ಇಬ್ಬರು ಹೆಣ್ಣು ಮಕ್ಕಳು ಒಂದು ಗಂಡು ಮಗು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.ಅಂತಿಮ ಸಂಸ್ಕಾರ ಲಾಯಿಲದ ಮುಕ್ತಿಧಾಮದಲ್ಲಿ ಇಂದು ಮಧ್ಯಾಹ್ನ ನೆರವೇರಲಿದೆ .