- Advertisement -
- Advertisement -
ರಾಜ್ ಬಿ.ಶೆಟ್ಟಿ ನಿರ್ದೇಶನದ, ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಶೀರ್ಷಿಕೆ ವಿವಾದ ಎದುರಾಗಿದೆ. ʻಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರು ಆಕ್ಷೇಪ ಎತ್ತಿದ್ದಾರೆ.
ಈ ಕುರಿತು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು ಅವರು ಪತ್ರದಲ್ಲಿ ಖಡಕ್ ಆಗಿ ತಿಳಿಸಿದ್ದಾರೆ. ಇದೀಗ ರಮ್ಯಾ ಅವರು ತಮ್ಮ ಚಿತ್ರದ ಶೀರ್ಷಿಕೆ ಬದಲಾಯಿಸುತ್ತಾರಾ ಕಾದು ನೋಡಬೇಕಿದೆ.
- Advertisement -