Friday, June 27, 2025
Homeಕರಾವಳಿಪುತ್ತೂರು: ಮಕ್ಕಳ ಕೈಯಲ್ಲಿದ್ದ ರಕ್ಷಾಬಂಧನವನ್ನು ತೆಗೆಸಿದ ಶಿಕ್ಷಕರು: ಶಿಕ್ಷಕರ ವಿರುದ್ಧ ಮಕ್ಕಳ ಪೋಷಕರು ಗರಂ

ಪುತ್ತೂರು: ಮಕ್ಕಳ ಕೈಯಲ್ಲಿದ್ದ ರಕ್ಷಾಬಂಧನವನ್ನು ತೆಗೆಸಿದ ಶಿಕ್ಷಕರು: ಶಿಕ್ಷಕರ ವಿರುದ್ಧ ಮಕ್ಕಳ ಪೋಷಕರು ಗರಂ

spot_img
- Advertisement -
- Advertisement -

ಪುತ್ತೂರು: ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನವನ್ನು ಶಾಲೆಯಲ್ಲಿ ಶಿಕ್ಷಕರು ಬಿಚ್ಚಿಸಿದಕ್ಕೆ  ಮಕ್ಕಳ ಪೋಷಕರು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಪುತ್ತೂರು ತಾಲೂಕಿನ ಪಾಪೆ ಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 19 ರಂದು ನಡೆದಿದೆ.

ಈ ಸಂಬಂಧ ಪೋಷಕರು ಶಾಲಾ ಮುಖ್ಯೋಪಾಧ್ಯಾಯರ ಜೊತೆ ಮಾತುಕತೆ ನಡೆಸಿ ಮತ್ತೆ ಮಕ್ಕಳ ಕೈಗೆ ರಕ್ಷಾಬಂಧನವನ್ನು ಮತ್ತೆ ಕಟ್ಟಿಸಿದ ಬಳಿಕ ಪ್ರಕರಣ ಸುಖಾಂತ್ಯ ಕಂಡಿದೆ. ಪಾಪೆಮಜಲು ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಕೈಯಲ್ಲಿದ್ದ ರಕ್ಷಾಬಂಧನವನ್ನು ಬಿಚ್ಚುವಂತೆ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ತಿಳಿಸಿದ್ದು, ಈ ಬಗ್ಗೆ ಅರಿತ ಮಕ್ಕಳ ಪೋಷಕರು ಶಾಲೆಗೆ ಬಂದು ಮುಖ್ಯೋಪಾಧ್ಯಾಯರಾದ ತೆರೇಜ್ ಎಂ ಸಿಕ್ವೇರಾ ಮತ್ತು ಶಿಕ್ಷಕರ ಜೊತೆ ಮಾತುಕತೆ ನಡೆಸಿದರು.

ಈ ವೇಳೆ ಶಾಲಾ ಮುಖ್ಯೋಪಾಧ್ಯಾಯರು ಮಾತನಾಡಿ, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅದನ್ನು ಬಿಚ್ಚುವಂತೆ ಹೇಳಿದ್ದೆ ಹೊರತು ಬೇರೆ ಯಾವ ವಿಧದಿಂದಲೂ ಅಲ್ಲ, ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನವು ತುಂಬಾ ಕಪ್ಪಾಗಿದ್ದು, ಈ ಹಿನ್ನೆಲೆ ಮಕ್ಕಳ ಆರೋಗ್ಯ ಕಾಳಜಿಯಿಂದಾಗಿ ಅದನ್ನು ಬಿಚ್ಚಿಡುವಂತೆ ಹೇಳಿದ್ದಾಗಿ ಹೇಳಿದರು.

- Advertisement -
spot_img

Latest News

error: Content is protected !!