Thursday, May 16, 2024
Homeಕರಾವಳಿಬೆಳ್ತಂಗಡಿ : ತುಮಕೂರು ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ; ಪ್ರಕರಣದ ತನಿಖೆ ಬಗ್ಗೆ ತುಮಕೂರು...

ಬೆಳ್ತಂಗಡಿ : ತುಮಕೂರು ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ; ಪ್ರಕರಣದ ತನಿಖೆ ಬಗ್ಗೆ ತುಮಕೂರು ಎಡಿಷನ್ ಎಸ್ಪಿಯಿಂದ ಮಾಹಿತಿ ಪಡೆದ ರಕ್ಷಿತ್ ಶಿವರಾಂ

spot_img
- Advertisement -
- Advertisement -

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೂವರು ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳ ತಂಡದಿಂದ  ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಬಿ.ಎಸ್.ಅಬ್ದುಲ್ ಖಾದರ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಕಚೇರಿಗೆ ಮಾ.24 ರಂದು ಸಂಜೆ ಭೇಟಿ ಮಾಡಿ ಪ್ರಕರಣ ಬಗ್ಗೆ ಮಾಹಿತಿ ಪಡೆದುಕೊಂಡು ಹತ್ಯೆ ಯಾವ ಕಾರಣಕ್ಕೆ ಮಾಡಿದ್ದಾರೆ ಇದರ ಹಿಂದಿರುವ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಜೊತೆಗೆ ಮೂವರ ಮೃತದೇಹದ ಡಿಎನ್ಎ ಪರೀಕ್ಷೆ ಅದಷ್ಟು ಬೇಗ ಮಾಡಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲು ಮನವಿ ಮಾಡಿಕೊಂಡರು. ಈ ವೇಳೆ ಎಡಿಷನ್ ಎಸ್ಪಿ ಅಬ್ದುಲ್ ಖಾದರ್ ಅವರು ಈ ಮೂರು ಜನರ ಹತ್ಯೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಇನ್ನೂ ಎರಡು ದಿನದ ಒಳಗೆ ಪ್ರಕರಣದ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ತುಮಕೂರು ಎಡಿಷನ್ ಎಸ್ಪಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು  ಬೆಳ್ತಂಗಡಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.

- Advertisement -
spot_img

Latest News

error: Content is protected !!