Thursday, June 4, 2026
Homeಕರಾವಳಿಮಂಗಳೂರುಮಂಗಳೂರು: ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ. ರಮಾನಾಥ ಹೆಗ್ಡೆ ನಿಧನ

ಮಂಗಳೂರು: ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ. ರಮಾನಾಥ ಹೆಗ್ಡೆ ನಿಧನ

- Advertisement -
- Advertisement -

ಮಂಗಳೂರು: ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ. ರಮಾನಾಥ ಹೆಗ್ಡೆ (72) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.

ಮಂಗಳಾದೇವಿ ದೇವಸ್ಥಾನದಲ್ಲಿ  ಕಳೆದ 31ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು. ನಗರದ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರ ಅಂತಿಮ ದರ್ಶನ ಜ.17ರಂದು ಮಂಗಳಾದೇವಿ ದೇವಸ್ಥಾನ ಸಮೀಪದ ಸ್ವಗೃಹದಲ್ಲಿ ಬೆಳಗ್ಗೆ 8.00 ರಿಂದ 11.00 ವರೆಗೆ ನಡೆಯಲಿದೆ. 11.30ಕ್ಕೆ ನಂದಿಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದರ.

ರಮಾನಾಥ ಹೆಗ್ಡೆ  ಅವರ ನಿಧನಕ್ಕೆ  ಅನುವಂಶಿಕ ಮೊಕ್ತೇಸರರಾದ ರಘುರಾಮ್ ಉಪಾಧ್ಯಾಯ, ಎಸ್. ಹರೀಶ್ ಐತಾಳ್, ಎಂ. ಅರುಣ್ ಐತಾಳ್, ಶ್ರೀನಿವಾಸ್ ಐತಾಳ್, ಪರ್ಯಾಯ ಅರ್ಚಕರಾದ ವಾಸುದೇವ ಐತಾಳ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿö,  ಮೀನುಗಾರ ಮುಖಂಡ ನಿತಿನ್ ಕುಮಾರ್, ಟ್ರಸ್ಟಿ  ಪ್ರೇಮಲತಾ ಎಸ್. ಕುಮಾರ್, ಮಂಗಳಾದೇವಿ ಸೇವಾ ಸಮಿತಿ ಅಧ್ಯಕ್ಷ ದಿಲ್‌ರಾಜ್ ಆಳ್ವ, ಮಾಜಿ ಅಧ್ಯಕ್ಷ ಬಿ. ಅಶೋಕ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

- Advertisement -

Latest News

error: Content is protected !!