Sunday, May 12, 2024
Homeತಾಜಾ ಸುದ್ದಿರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಹೊಸ ತಿರುವು: ಕೊನೆಗೂ ರಹಸ್ಯ ಬಿಚ್ಚಿಟ್ಟ 'ಸಿಡಿ ಲೇಡಿ'

ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಹೊಸ ತಿರುವು: ಕೊನೆಗೂ ರಹಸ್ಯ ಬಿಚ್ಚಿಟ್ಟ ‘ಸಿಡಿ ಲೇಡಿ’

spot_img
- Advertisement -
- Advertisement -

ಬೆಂಗಳೂರು: ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ನೀಡಲಾಗಿದ್ದು, ತನಿಖೆ ಮುಂದುವರೆದಿದೆ. ಈ ಪ್ರಕರಣ ಮತ್ತೊಂದು ಹೊಸ ತಿರುವು ಪಡೆದುಕೊಂಡಿದೆ. ಸಿಡಿಯಲ್ಲಿದ್ದ ಯುವತಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ನಮ್ಮ ಹಿಂದೆ ಯಾರೂ ಇಲ್ಲ. ಯಾವ ರಾಜಕೀಯದವರು ಇಲ್ಲ. ವಿಡಿಯೋವನ್ನು ಹೇಗೆ ಮಾಡಿದರು ಎನ್ನುವುದು ನನಗೆ ಗೊತ್ತಿಲ್ಲ. ಯಾರು ಈ ವಿಡಿಯೋ ಬಿಡುಗಡೆ ಮಾಡಿದ್ದಾರೋ ಗೊತ್ತಿಲ್ಲ. ನನ್ನ ಮಾನ ಮರ್ಯಾದೆ ಊರು ತುಂಬ ಹರಾಜಾಗಿದೆ. ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ನನ್ನ ಅಪ್ಪ-ಅಮ್ಮ ಕೂಡ ಹಲವು ಸಲ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಗಾಗಿ ನನಗೆ, ನನ್ನ ಕುಟುಂಬಸ್ಥರಿಗೆ ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್​ ಬೊಮ್ಮಾಯಿಗೆ ಮನವಿ ಮಾಡುತ್ತೇನೆ ಎಂದು ಯುವತಿ ಹೇಳಿದ್ದಾರೆ.

ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ ರಮೇಶ್ ವಂಚನೆ ಮಾಡಿದ್ದಾರೆ ಎಂದು ಸಿಡಿ ದೃಶ್ಯದಲ್ಲಿದ್ದ ಸಂತ್ರಸ್ತೆ ವಿಡಿಯೋದಲ್ಲಿ ಹೇಳಿದ್ದಾರೆ. ನನ್ನ ಮನೆ ಬಳಿ ಬಂದು ಜನರು ಕೇಳಿಕೊಂಡು ಹೋಗುತ್ತಿದ್ದಾರೆ. ನನಗೆ ಕೆಲಸ ಕೊಡಿಸುವುದಾಗಿ ರಮೇಶ್​ ಹೇಳಿದ್ದರು. ಈಗ ನೋಡಿದರೆ ವಿಡಿಯೋಗಳನ್ನ ಹರಿ ಬಿಡುತ್ತಿದ್ದಾರೆ. ವಿಡಿಯೋ ಹೇಗೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ ಎಂದು ಸಂತ್ರಸ್ತೆ ಹೇಳಿದ್ದಾರೆ.

- Advertisement -
spot_img

Latest News

error: Content is protected !!