ಬೆಂಗಳೂರು: ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ನೀಡಲಾಗಿದ್ದು, ತನಿಖೆ ಮುಂದುವರೆದಿದೆ. ಈ ಪ್ರಕರಣ ಮತ್ತೊಂದು ಹೊಸ ತಿರುವು ಪಡೆದುಕೊಂಡಿದೆ. ಸಿಡಿಯಲ್ಲಿದ್ದ ಯುವತಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ನಮ್ಮ ಹಿಂದೆ ಯಾರೂ ಇಲ್ಲ. ಯಾವ ರಾಜಕೀಯದವರು ಇಲ್ಲ. ವಿಡಿಯೋವನ್ನು ಹೇಗೆ ಮಾಡಿದರು ಎನ್ನುವುದು ನನಗೆ ಗೊತ್ತಿಲ್ಲ. ಯಾರು ಈ ವಿಡಿಯೋ ಬಿಡುಗಡೆ ಮಾಡಿದ್ದಾರೋ ಗೊತ್ತಿಲ್ಲ. ನನ್ನ ಮಾನ ಮರ್ಯಾದೆ ಊರು ತುಂಬ ಹರಾಜಾಗಿದೆ. ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ನನ್ನ ಅಪ್ಪ-ಅಮ್ಮ ಕೂಡ ಹಲವು ಸಲ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಗಾಗಿ ನನಗೆ, ನನ್ನ ಕುಟುಂಬಸ್ಥರಿಗೆ ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡುತ್ತೇನೆ ಎಂದು ಯುವತಿ ಹೇಳಿದ್ದಾರೆ.
ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ ರಮೇಶ್ ವಂಚನೆ ಮಾಡಿದ್ದಾರೆ ಎಂದು ಸಿಡಿ ದೃಶ್ಯದಲ್ಲಿದ್ದ ಸಂತ್ರಸ್ತೆ ವಿಡಿಯೋದಲ್ಲಿ ಹೇಳಿದ್ದಾರೆ. ನನ್ನ ಮನೆ ಬಳಿ ಬಂದು ಜನರು ಕೇಳಿಕೊಂಡು ಹೋಗುತ್ತಿದ್ದಾರೆ. ನನಗೆ ಕೆಲಸ ಕೊಡಿಸುವುದಾಗಿ ರಮೇಶ್ ಹೇಳಿದ್ದರು. ಈಗ ನೋಡಿದರೆ ವಿಡಿಯೋಗಳನ್ನ ಹರಿ ಬಿಡುತ್ತಿದ್ದಾರೆ. ವಿಡಿಯೋ ಹೇಗೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ ಎಂದು ಸಂತ್ರಸ್ತೆ ಹೇಳಿದ್ದಾರೆ.