- Advertisement -
- Advertisement -
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾವನ್ನು ರಮ್ಯಾ ಅವರೇ ನಿರ್ಮಾಣ ಮಾಡಿ, ಅವರೇ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ನಾಯಕಿಯ ಸ್ಥಾನವನ್ನು ಬೇರೊಬ್ಬರು ತುಂಬಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಸಿರಿ ರವಿಕುಮಾರ್ ಲೀಡ್ ಪಾತ್ರದಲ್ಲಿ ಮಾಡಲಿದ್ದಾರೆ ಎಂದು ಸ್ವತಃ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ತಿಳಿಸಿದೆ.
ಸ್ಯಾಂಡಲ್ವುಡ್ ಕ್ವೀನ್, ಮೋಹಕ ತಾರೆ ರಮ್ಯಾ ಅವರ ಕಮ್ ಬ್ಯಾಕ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ರಾಜ್ ಬಿ ಶೆಟ್ಟಿ ಜೊತೆ ಸ್ಯಾಂಡಲ್ವುಡ್ನಲ್ಲಿ ಕಮ್ ಬ್ಯಾಕ್ ಮಾಡುತ್ತಾರೆ ಎಂದಿದ್ದ ರಮ್ಯಾ ಅವರು ಮೊದಲ ಬಾರಿ ಪ್ರೊಡ್ಯೂಸರ್ ಹಾಗೂ ನಟಿಯಾಗಿ ಸಿನಿಮಾ ಮಾಡುವವರಿದ್ದರು. ಆದರೆ ಈಗ ಪ್ಲಾನ್ ಚೇಂಜ್ ಆಗಿದೆ. ಈ ಸಿನಿಮಾದಿಂದ ರಮ್ಯಾ ಹೊರಬಂದಿದ್ದಾರೆ. ಬದಲಾಗಿ ರಾಜ್ ಬಿ ಶೆಟ್ಟಿ ಸಿನಿಮಾದಲ್ಲಿ ಪ್ರೊಡ್ಯೂಸರ್ ಆಗಿ ಮಾತ್ರ ಮುಂದುವರಿಯಲಿದ್ದಾರೆ.
- Advertisement -