- Advertisement -
- Advertisement -
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲಿನ ಚಪ್ಪಲಿ ಎಸೆತ ಪ್ರಕರಣವನ್ನು ಸ್ಯಾಂಡಲ್ ವುಡ್ ನ ಅನೇಕ ನಟರು ಖಂಡಿಸಿದ್ದಾರೆ. ಇನ್ನು ದರ್ಶನ್ ಗೆ ಅವಮಾನ ಮಾಡಿದ ವಿಚಾರಕ್ಕೆ ಎಲ್ಲೆಡೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದ ಈ ಬೆನ್ನಲ್ಲೆ ನಟಿ ರಮ್ಯಾ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಎಲ್ಲಾ ಅಭಿಮಾನಿ ಸಂಘಗಳು ಸಭ್ಯತೆಯನ್ನು ಕಾಪಾಡಿಕೊಳ್ಳಬೇಕು. ಎಲ್ಲಾ ನಟರು ತಮ್ಮ ಅಭಿಮಾನಿ ಸಂಘಗಳಿಗೆ ಇತರ ನಟರು ಅಥವಾ ಯಾರನ್ನಾದರೂ ಟ್ರೋಲ್ ಮಾಡದಂತೆ ಎಚ್ಚರಿಕೆ ನೀಡಬೇಕು. ಮಹಿಳೆಯರು ಮತ್ತು ಮಕ್ಕಳ ಬಗ್ಗೆ ಅವಹೇಳನಕಾರಿ ಕಾಮೆಂಟ್ ಗಳನ್ನು ಪೋಸ್ಟ್ ಮಾಡಬೇಡಿ. ಎಲ್ಲಾ ನಿಂದನೆಗಳು ಮತ್ತು ಕಸ್ ಪದಗಳು ಮಹಿಳೆಯರನ್ನು ಗುರಿಯಾಗಿಸಿಕೊಂಡಿವೆ.ಇಂತಹ ಟ್ವಿಟರ್ ಅಕೌಂಟ್ ಅನ್ನು ನಿಷೇಧಿಸಬೇಕು ಎಂದು ಟ್ವಿಟರ್ ಸಂಸ್ಥೆಗೆ ನಟಿ ರಮ್ಯಾ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.
- Advertisement -