ಬೆಳ್ತಂಗಡಿ : ಬಾಲಕಿ ಮೇಲೆ ಅತ್ಯಾಚಾರ ಮಾಡಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸುಧೀರ್ ಜೋಗಿ (27) ಚಿಕ್ಕಮಗಳೂರಿನಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸುವಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ತಂಡ ಯಶಸ್ವಿಯಾಗಿದ್ದಾರೆ.
ದಿನಾಂಕ26-12-2021 ರಂದು ಬಾಲಕಿ ಮೇಲೆ ಆರೋಪಿ ಸುಧೀರ್ ಎಂಬ ಟಿವಿ ನೋಡಲು ಹೋದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದು ನಂತರ ಬೆದರಿಕೆ ಹಾಕಿ ನಂತರ ಕೂಡ ಅತ್ಯಾಚಾರ ಮಾಡಿತ್ತಿದ್ದು ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು ನಂತರ ಖಾಸಗಿ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿದ್ದು ಇದಕ್ಕೆ ಹಲವು ಮಂದಿ ಸಾಥ್ ನೀಡಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಸೇರಿದಂತರ ಹಲವು ಸೆಕ್ಷನ್ ಅಡಿಯಲ್ಲಿ ದಿನಾಂಕ 02-01-2023 ರಂದು ಪ್ರಕರಣ ದಾಖಲಾಗಿತ್ತು.
ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ನಿವಾಸಿ ಮೂರನೇ ಆರೋಪಿ ಮನೋಹರ(23) ಮತ್ತು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ನಿವಾಸಿ ನಾಲ್ಕನೇ ಆರೋಪಿ ಮಾಧವ@ಮಾಧು(30) ಎಂಬಾತನನ್ನು ಜ.7 ರಂದು ಬಂಧಿಸಿ ಜೈಲಿಗಟ್ಟಿದ್ದರು. ಇದೀಗ ಪ್ರಕರಣ ಪ್ರಮುಖ ಆರೋಪಿ ಕುಡಿರುದ್ಯವಾರ ಗ್ರಾಮದ ಕೊಪ್ಪದಗುಂಡಿ ನಿವಾಸಿ ಶಂಕರ ಜೋಗಿ ಮಗನಾದ ಸುಧೀರ್ ಜೋಗಿ (27) ಎಂಬಾತನನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಿ ಕರೆತರಲಾಗಿದೆ.
ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಮತ್ತು ಸಬ್ ಇನ್ಸ್ಪೆಕ್ಟರ್ ಅರ್ಜುನ್ ತಂಡದ ಸಿಬ್ಬಂದಿಗಳಾದ ವಿಜಯ ಕುಮರ್ ರೈ, ವಿಶ್ವನಾಥ್, ಇಬ್ರಾಹಿಂ , ಚರಣ್ ರಾಜ್, ಗಂಗಾಧರ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಪ್ರತಿಭಟನೆಯ ಎಚ್ಚರಿಕೆ ನೀಡಿದ್ದ ಬಿಲ್ಲವ ಸಮುದಾಯ:
ಅತ್ಯಾಚಾರ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸದೆ ಸುಮ್ಮನಿದ್ದದ್ದಕ್ಕೆ ವಿರುದ್ಧ ವ್ಯಕ್ತಪಡಿಸಿದ ಬಿಲ್ಲವ ಸಮುದಾಯ ಪೊಲೀಸ್ ಠಾಣೆಗೆ ಹೋಗಿ ಮನವಿ ಮಾಡಿತ್ತು. ಒಂದು ವಾರದಲ್ಲಿ ಬಂಧಿಸದೆ ಇದ್ದಲ್ಲಿ ಬೃಹತ್ ಪ್ರತಿಭಟನೆಯ ಸಭೆಯನ್ನು ಮಾಡುವ ಎಚ್ಚರಿಕೆ ನೀಡಿತ್ತು. ಇದರಿಂದ ಪ್ರಕರಣ ಬಗ್ಗೆ ಗಂಭೀರವಾಗಿ ತೆಗೆದುಕೊಂಡು ಬೆಳ್ತಂಗಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.