Tuesday, April 30, 2024
Homeಕರಾವಳಿಉಡುಪಿಉಡುಪಿ: ಪರಿಶಿಷ್ಟ ಜಾತಿಯ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ :  ಆರೋಪಿಗೆ ಅಜೀವ...

ಉಡುಪಿ: ಪರಿಶಿಷ್ಟ ಜಾತಿಯ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ :  ಆರೋಪಿಗೆ ಅಜೀವ ಕಾರಾಗೃಹ ಶಿಕ್ಷೆ

spot_img
- Advertisement -
- Advertisement -

ಉಡುಪಿ: ಪರಿಶಿಷ್ಟ ಜಾತಿಯ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಆರೋಪಿಗೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.ಪಶ್ಚಿಮ ಬಂಗಾಳ ಮೂಲದ ರಾಜೀಬ್ ಅಲಿಯಾಸ್ ಚೋಟು (20) ಶಿಕ್ಷೆಗೆ ಗುರಿಯಾದ ಆರೋಪಿ.

2018ರ ಫೆಬ್ರವರಿ ತಿಂಗಳಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ರಸ್ತೆ ಕೆಲಸಕ್ಕೆ ಬಂದಿದ್ದ ರಾಜೀಬ್ 14 ವರ್ಷದ ಬಾಲಕಿಯನ್ನು ಮನೆಯಿಂದ ಅಪಹರಿಸಿದ್ದನು. ಮಗಳು ಕಾಣೆಯಾದ ಬಗ್ಗೆ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅಪ್ರಾಪ್ತೆಯನ್ನು ರೈಲು ನಿಲ್ದಾಣವೊಂದರಲ್ಲಿ ಪತ್ತೆ ಮಾಡಿ ಪೊಲೀಸರು ಕರೆ ತಂದಿದ್ದರು. ಆಪ್ತ ಸಮಾಲೋಚನೆ ವೇಳೆ ಬಾಲಕಿಯು ರಾಜೀಬ್ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಹಾಗೂ ಇತರ ಐವರ ವಿರುದ್ಧ ಮಾಹಿತಿ ನೀಡಿದ ಆಧಾರದಲ್ಲಿ ಎಲ್ಲರನ್ನು ಬಂಧಿಸಲಾಗಿತ್ತು.

ಮೊದಲಿಗೆ ಅಂದಿನ ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ ಭಾಗಶಃ ತನಿಖೆ ನಡೆಸಿದ್ದು ತರುವಾಯ ಅಂದಿನ ಡಿವೈಎಸ್ಪಿ ಟಿ.ಆರ್ ಜೈಶಂಕರ್ ದೋಷಾರೋಪಣಾ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 46 ಸಾಕ್ಷಿಗಳ ಪೈಕಿ ನ್ಯಾಯಾಲಯದಲ್ಲಿ 28 ಸಾಕ್ಷಿಗಳ ವಿಚಾರಣೆ ನಡೆದಿದ್ದು, ಸಂತ್ರಸ್ತ ಬಾಲಕಿ ನುಡಿದ ಸಾಕ್ಷ್ಯ ಹಾಗೂ ಆಕೆ ಸಹೋದರ, ಸಹೋದರಿ ಸಾಕ್ಷಿಗಳು, ಸಾಂದರ್ಭಿಕ ಸಾಕ್ಷಿಗಳ ಹೇಳಿಕೆಯಿಂದ ರಾಜೀಬ್ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು. ಉಳಿದ ಐವರು ಆರೋಪಗಳನ್ನು ಖುಲಾಸೆಗೊಳಿಸಲಾಯಿತು.

ಪರಿಶಿಷ್ಟ ಜಾತಿಯ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ರಾಜೀಬ್ ಗೆ ಅಜೀವ ಕಾರಾಗೃಹ ಶಿಕ್ಷೆ ಸಹಿತ, ಅಪಹರಣ, ಅತ್ಯಾಚಾರ ಮೊದಲಾದ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಿದ್ದು 56 ಸಾವಿರ ದಂಡ ವಿಧಿಸಲಾಗಿದೆ.

ಈ ದಂಡದಲ್ಲಿ 16 ಸಾವಿರ ರೂ. ಸರ್ಕಾರಕ್ಕೆ ಹಾಗೂ 40 ಸಾವಿರ ನೊಂದ ಬಾಲಕಿಗೆ ನೀಡಲು ಆದೇಶಿಸಿದ್ದಲ್ಲದೆ ಸಂತ್ರಸ್ತೆಗೆ 5 ಲಕ್ಷ ಪರಿಹಾರವನ್ನು ಸರ್ಕಾರ ನೀಡುವಂತೆ ನ್ಯಾಯಾಲಯ ತೀರ್ಪುನಲ್ಲಿ ತಿಳಿಸಿದೆ.

- Advertisement -
spot_img

Latest News

error: Content is protected !!