Sunday, May 19, 2024
HomeUncategorizedಹಾಸನದಲ್ಲಿ ರೇವ್ ಪಾರ್ಟಿ ಆಯೋಜನೆ: ಮಂಗಳೂರಿನ ಲೇಡಿ ಕಾನ್ಸ್ ಟೇಬಲ್ ಹಾಗೂ ಆಕೆಯ ಪುತ್ರನ ವಿರುದ್ಧ...

ಹಾಸನದಲ್ಲಿ ರೇವ್ ಪಾರ್ಟಿ ಆಯೋಜನೆ: ಮಂಗಳೂರಿನ ಲೇಡಿ ಕಾನ್ಸ್ ಟೇಬಲ್ ಹಾಗೂ ಆಕೆಯ ಪುತ್ರನ ವಿರುದ್ಧ ಆರೋಪ

spot_img
- Advertisement -
- Advertisement -

ಮಂಗಳೂರು : ಹಾಸನ ಜಿಲ್ಲೆಯ ಆಲೂರು ಠಾಣೆ ವ್ಯಾಪ್ತಿಯಲ್ಲಿ ಮಂಗಳೂರಿನ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ತಮ್ಮ ಪುತ್ರನ ಜೊತೆ ಸೇರಿ ಆಯೋಜನೆ ಮಾಡಿಸಿಕ್ಕಿ ಬಿದ್ದಿದ್ದಾರೆ ಎನ್ನಲಾಗಿದೆ.

ರೇವ್ ಪಾರ್ಟಿ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಹಾಸನ ಎಸ್ಪಿ ಶ್ರೀನಿವಾಸ ಗೌಡ ಕಳೆದ ಭಾನುವಾರ ನಸುಕಿನಲ್ಲಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದರು. ಈ ವೇಳೆ ಪಾರ್ಟಿಯ ಅಮಲಿನಲ್ಲಿದ್ದ 131 ಮಂದಿಯನ್ನು ವಶಕ್ಕೆ ಪಡೆದಿದ್ದರು. ಈ ಪೈಕಿ ಮಂಗಳೂರಿನ ಪಾಂಡೇಶ್ವರದ ನಾರ್ಕೋಟಿಕ್ ಅಂಡ್ ಇಕನಾಮಿಕ್ ಕ್ರೈಮ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಶ್ರೀಲತಾ ಕೂಡ ಒಬ್ಬರು ಎನ್ನಲಾಗಿದೆ.

ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಅರೆನಗ್ನ ಸ್ಥಿತಿಯಲ್ಲಿದ್ದ ಯುವಕ- ಯುವತಿಯರು ಡ್ರಗ್ ಅಮಲಿನಲ್ಲಿದ್ದರು. ಪೊಲೀಸರು ಅರೆಸ್ಟ್ ಮಾಡುತ್ತಿದ್ದಂತೆ, ದಯವಿಟ್ಟು ನಮ್ಮನ್ನು ಬಿಟ್ಟುಬಿಡಿ, ನಮಗೆ ಮದುವೆಯಾಗಿದೆ. ರಜೆಯಲ್ಲಿ ಉಳಿದುಕೊಳ್ಳಲು ಬಂದಿದ್ದೆವು ಎಂದು ಹೇಳಿ ಅಂಗಲಾಚಿದ್ದರು. ಆದರೆ, ಪೊಲೀಸರು ಯಾರನ್ನು ಉಳಿಸದೇ ಭಾನುವಾರ ಬೆಳಗ್ಗೆ ಎಲ್ಲರನ್ನೂ ವಶಕ್ಕೆ ಪಡೆದು ಬ್ಲಡ್ ಸ್ಯಾಂಪಲ್ ತಪಾಸಣೆಗೆ ಕಳುಹಿಸಿದ್ದರು. ಇದೇ ವೇಳೆ, ಪಾರ್ಟಿ ಆಯೋಜಿಸಿದ್ದ ಜಾಗದಲ್ಲಿ ಎಂಡಿಎಂಎ, ಎಲ್‌ಎಸ್ ಡಿ, ಗಾಂಜಾ ಇನ್ನಿತರ ಮಾದಕ ದ್ರವ್ಯಗಳು ಪತ್ತೆಯಾಗಿದ್ದವು. ಎಸ್ಟೇಟ್ ಮಾಲೀಕ ಎನ್ನಲಾಗಿದ್ದ ಗಗನ್ ಮತ್ತು ಪಾರ್ಟಿ ಆಯೋಜಿಸಿದ್ದಾರೆ ಎನ್ನಲಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸೋನಿ, ಪಂಕಜ್, ನಾಸಿರ್ ಎಂಬ ಮೂವರನ್ನು ಬಂಧಿಸಲಾಗಿತ್ತು. ಇವರನ್ನು ತನಿಖೆಗೆ ಒಳಪಡಿಸಿದಾಗ ಮಂಗಳೂರಿನ ಲೇಡಿ ಪೊಲೀಸ್ ಮತ್ತು ಮತ್ತಾಕೆಯ ಪುತ್ರನ ಹೆಸರು ಹೊರಬಿದ್ದಿದೆ.

ಮಂಗಳೂರಿನ ಪಾಂಡೇಶ್ವರದ ನಾರ್ಕೋಟಿಕ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ಶ್ರೀಲತಾ ಮೂಲತಃ ಕೇರಳದವರು. ಕರ್ನಾಟಕದಲ್ಲಿ ಪೊಲೀಸ್ ಆಗಿ ಈ ಹಿಂದೆ ಪಣಂಬೂರು, ಸುರತ್ಕಲ್, ಬಜ್ಪೆಯಲ್ಲಿ ಕೆಲಸ ಮಾಡಿದ್ದ ಶ್ರೀಲತಾ ಕಳೆದ ನಾಲ್ಕು ವರ್ಷಗಳಿಂದ ನಾರ್ಕೋಟಿಕ್ ಠಾಣೆಯಲ್ಲಿದ್ದರು. ಈ ನಡುವೆ, ಮಂಗಳೂರಿನ ಕೆಲವು ಯುವಕರ ಜೊತೆ ನಂಟು ಬೆಳೆಸಿಕೊಂಡಿದ್ದ ಈಕೆಯೇ ಇದೀಗ ಹಾಸನದಲ್ಲಿ ಪೊಲೀಸರ ಕಣ್ಣುತಪ್ಪಿಸಿ ರೇವ್ ಪಾರ್ಟಿ ಆಯೋಜನೆ ಮಾಡಿದ ಆರೋಪದಲ್ಲಿ ಸಿಕ್ಕಿಬಿದ್ದಿದ್ದಾರೆ. ನಾರ್ಕೋಟಿಕ್ ಠಾಣೆಯಲ್ಲಿದ್ದು ಡ್ರಗ್ ಪೆಡ್ಲರ್ ಗಳನ್ನು ಹಿಡಿಯಬೇಕಾಗಿದ್ದ ಪೊಲೀಸ್ ಪೇದೆ ತಾನೇ ಡ್ರಗ್ ಪಾರ್ಟಿಯಲ್ಲಿ ಸಿಕ್ಕಿಬಿದ್ದು ಈಗ ಅಮಾನತ್ತಿನ ತೂಗುಗತ್ತಿ ಎದುರಿಸುತ್ತಿದ್ದಾರೆ.

ಬೆಂಗಳೂರಿನ ಕಂಪನಿ ಒಂದರಲ್ಲಿ ಕೆಲಸಕ್ಕಿದ್ದಾನೆ ಎನ್ನಲಾಗುತ್ತಿರುವ ಲೇಡಿ ಪೊಲೀಸ್ ಮಗ ಅತುಲ್, ಡ್ರಗ್ ಪೆಡ್ಲರ್ ಗಳ ಜೊತೆ ನಿಕಟ ನಂಟು ಇರಿಸಿಕೊಂಡಿದ್ದು ಸ್ವತಃ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಎನ್ನಲಾಗುತ್ತಿದೆ. ಸುರತ್ಕಲ್ ಬಳಿಯ ಕಾಟಿಪಳ್ಳದ ಕೃಷ್ಣಾಪುರದಲ್ಲಿ ತಾಯಿ ಜೊತೆ ಮನೆ ಮಾಡಿಕೊಂಡಿದ್ದ ಅತುಲ್, ಬೆಂಗಳೂರು ಮತ್ತು ಮಂಗಳೂರಿನಲ್ಲಿ ಡ್ರಗ್ ಪ್ರಿಯರ ಗೆಳೆತನ ಸಾಧಿಸಿದ್ದ ಅಂತಾ ಹೇಳಲಾಗಿದೆ. ಇದೇ ಕಾರಣದಿಂದ ಬೆಂಗಳೂರಿನ ಹುಡುಗರ ಜೊತೆ ಸೇರಿ ಸಕಲೇಶಪುರದ ನಿಗೂಢ ಜಾಗದಲ್ಲಿ ರೇವ್ ಪಾರ್ಟಿ ಆಯೋಜಿಸಲು ಪ್ಲಾನ್ ಹಾಕಿದ್ದ. ಮೊನ್ನೆ ಪೊಲೀಸರು ದಾಳಿ ಮಾಡಿದ್ದು ಗೊತ್ತಾದ ಕೂಡಲೇ ಅತುಲ್ ಅಲ್ಲಿಂದ ಎಸ್ಕೇಪ್ ಆಗಿದ್ದು, ಹಾಸನ ಪೊಲೀಸರು ಆತನಿಗಾಗಿ ಶೋಧ ಆರಂಭಿಸಿದ್ದಾರೆ.

ರೇವ್ ಪಾರ್ಟಿಯಲ್ಲಿ ಪಾಲ್ಗೊಳ್ಳುವುದಕ್ಕೆ ಎಂಟ್ರಿ ಫೀಸ್ ಸೇರಿದಂತೆ ಸದಸ್ಯರ ಬರುವಿಕೆಯನ್ನು ದೃಢಪಡಿಸುವುದು ಎಲ್ಲವೂ ಆನ್ ಲೈನಲ್ಲೇ ನಡೆದಿತ್ತು. ಎಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿದೆ ಎನ್ನೋದನ್ನು ಕೂಡ ಕೊನೆಕ್ಷಣದ ವರೆಗೂ ನಿಗೂಢ ಆಗಿಯೇ ಇರಿಸಲಾಗಿತ್ತು. ಹತ್ತಾರು ಕಾರು, ದ್ವಿಚಕ್ರ ವಾಹನಗಳಲ್ಲಿ ಸದಸ್ಯರು ಬಂದಿದ್ದರು. ಅಲ್ಲಿ ಸೇರಿದ್ದವರಲ್ಲಿ ಉಡುಪಿ, ಮಣಿಪಾಲ, ಮಂಗಳೂರು ಮತ್ತು ಬೆಂಗಳೂರಿನ ಮಂದಿಯೇ ಹೆಚ್ಚಿದ್ದರು.

ಹಾಸನ ಎಸ್ಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ತನಿಖೆ ನಡೆದಿದ್ದು, ಪಾರ್ಟಿ ಕಿಂಗ್ ಪಿನ್ ಎನ್ನಲಾಗುತ್ತಿರುವ ಮಂಗಳೂರಿನ ಲೇಡಿ ಪೊಲೀಸ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ವಶಕ್ಕೆ ಪಡೆದ ಇತರೇ ಯುವಕರನ್ನು ಬ್ಲಡ್ ಸ್ಯಾಂಪಲ್ ಪಡೆದು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಲೇಡಿ ಪೊಲೀಸ್ ಅರೆಸ್ಟ್ ಆಗಿರುವ ಬಗ್ಗೆ ಹಾಸನ ಎಸ್ಪಿ ಕಚೇರಿಯಿಂದ ಮಂಗಳೂರು ಪೊಲೀಸ್ ಕಮಿಷನರಿಗೆ ವರದಿ ಬರಲಿದ್ದು, ಎಫ್‌ಐಆರ್ ನಲ್ಲಿ ಹೆಸರು ದಾಖಲಾಗಿದ್ದರೆ ಮಂಗಳೂರಿನ ನಾರ್ಕೋಟಿಕ್ ಠಾಣೆಯಿಂದ ಸಸ್ಪೆಂಡ್ ಆಗುವುದು ಖಚಿತ.

- Advertisement -
spot_img

Latest News

error: Content is protected !!