- Advertisement -
- Advertisement -
ಸಹಕಾರ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನೀಡುವ ‘ ಸಹಕಾರ ರತ್ನ ‘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಆಯ್ಕೆಯಾಗಿದ್ದಾರೆ .
ಇಂದು ಬೆಂಗಳೂರಿನ ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು .
ಉಡುಪಿ ತಾಲೂಕು ಮಲ್ಪೆ ಸಮೀಪದ ಕೊಡವೂರಿನವರಾದ ರವಿರಾಜ ಹೆಗ್ಡೆ , ಕೊಡವೂರು ಹಾಲು ಉತ್ಪಾದಕರ ಸಹಕಾರಿ ಸೊಸೈಟಿಯ ಅಧ್ಯಕ್ಷ , ನಿರ್ದೇಶಕರಾಗಿ ಸಹಕಾರಿ ಬದುಕು ಪ್ರಾರಂಭಿಸಿದ್ದು , ಅವಿಭಜಿತ ದಕ ಜಿಲ್ಲೆಯ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
- Advertisement -