- Advertisement -
- Advertisement -
ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣು ಮೂರ್ತಿ ದೇವಾಲಯಕ್ಕೆ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಮಂಗಳವಾರ ಭೇಟಿ ನೀಡಿದರು.
ತಮ್ಮ ಸಂಬಂಧಿಗಳಾದ ಸಂತೋಷ್ ಶಾಸ್ತ್ರಿ , ಕವಿತಾ ಶಾಸ್ತ್ರೀ ಹಾಗೂ ಕುಟುಂಬದವರೊಂದಿಗೆ ಬಂದ ಅವರು ಮೂಲ ನಾಗದೇವರಿಗೆ ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ , ಕಲ್ಪೋಕ್ತ ಪೂಜೆ , ನಾಗತಂಬಿಲ ಸೇವೆ ಅರ್ಪಿಸಿದರು.
ಬಳಿಕ ವಿಷ್ಣು ಮೂರ್ತಿ ದೇವರಿಗೆ ಮಹಾಪೂಜೆ ಸಲ್ಲಿಸಿದ್ರು. ನರಸಿಂಹ ತಂತ್ರಿ ಹಾಗೂ ಅಶೋಕ್ ಕಾರಂತ್ ಪೂಜಾ ವಿಧಿ ವಿಧಾನ ನೆರವೇರಿಸಿದರು.
- Advertisement -