- Advertisement -
- Advertisement -
ಬೆಂಗಳೂರು : ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಆರ್ ಸಿ ಬಿ ಅಭಿಮಾನಿಯೊಬ್ಬರು ಕಾಂತಾರ ಸಿನಿಮಾದಲ್ಲಿ ಬರುವ ಪಂಜುರ್ಲಿ ದೈವದ ವೇಷ ಧರಿಸಿ ಕೊಂಡಿದ್ದರು.
ಈ ಫೋಟೋವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಭಾರೀ ವಿರೋಧ ವ್ಯಕ್ತವಾಗಿದೆ.
ಕ್ರಿಕೆಟ್ ಮೈದಾನಕ್ಕೆ ಈ ರೀತಿಯ ವೇಷ ಧರಿಸಿ ಬರುವುದು ಸರಿಯಲ್ಲ.ಅಲ್ಲದೇ ಇದು ದೈವಾರಾಧನೆಗೆ ಅಪಚಾರವೆಸಗಿದಂತೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ..
- Advertisement -