ಸುಳ್ಯ: ಪ್ರವೀಣ್ ನೆಟ್ಟಾರ್ ಅವರಿಗೆ ಅವರ ಸಾವಿನ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು ಅನ್ನೋದನ್ನು ಅವರ ಸಹೋದರ ರಂಜಿತ್ ಅವರು ಬಹಿರಂಗಪಡಿಸಿದ್ದಾರೆ.ಕಳೆದ ಹಲವು ದಿನಗಳಿಂದ ಪ್ರವೀಣ್ಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ರಂಜಿತ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೂಡಲೇ ಕರೆಗಳು ಬರುತ್ತಿದ್ದವು ಎಂದಿದ್ದಾರೆ. ಇನ್ನು ಈ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ಪ್ರವೀಣ್ ತಿಳಿಸಿದ್ದರು ಎನ್ನಲಾಗಿದೆ.
ಇನ್ನು ಬೆಳ್ಳಾರೆಯಲ್ಲಿ ದೊಡ್ಡ ಮಟ್ಟದಲ್ಲಿ ಚಿಕನ್, ಮಟನ್ ದಂಧೆ ನಡೆಯುತ್ತಿದೆ. ಚಿಕನ್, ಮಟನ್, ಮೀನು ಮಾರಾಟ ಮಾಡುವ ದಂಧೆ ಮುಸ್ಲಿಮರ ಹಿಡಿತದಲ್ಲಿದೆ. ಹಲವು ದಿನಗಳ ಹಿಂದೆ ಹಿಂದೂಗಳೂ ಮಾರಾಟ ಮಾಡಲು ಆರಂಭಿಸಿದ್ದಾರೆ. ಇದರಿಂದಲೇ ಈ ಗಲಾಟೆ ಶುರುವಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಮಾಹಿತಿ ನೀಡಿರುವ ರಂಜಿತ್, ಒಂಬತ್ತು ತಿಂಗಳ ಹಿಂದೆಯಷ್ಟೇ ಪ್ರವೀಣ್ ಚಿಕನ್ ಅಂಗಡಿ ತೆರೆದಿದ್ದರು. ಇದೇ ಕೊಲೆಗೆ ಕಾರಣ ಇರಬಹುದು. ಇದರ ಹಿಂದೆ ಬಹು ದೊಡ್ಡ ಜಾಲವೇ ಇದೆ. ಝಾಕೀರ್ ಮತ್ತು ಶಫೀಕ್ ಪ್ರಮುಖ ಆರೋಪಿಗಳಲ್ಲ. ಇವರ ಹಿಂದೆ ಇರುವುದು ದೊಡ್ಡ ಜಾಲವಿದೆ ಎಂದಿದ್ದಾರೆ.