Wednesday, May 8, 2024
Homeತಾಜಾ ಸುದ್ದಿಬಸ್ ಟಿಕೆಟ್ ತೆಗೆದುಕೊಳ್ಳಬೇಡಿ, ಕರೆಂಟ್  ಬಿಲ್ ಕಟ್ಟಬೇಡಿ!:ಹಳ್ಳಿ ಹಳ್ಳಿ ತಿರುಗಿ ಮಹಿಳೆಯರಿಗೆ ಮನವಿ ಮಾಡುತ್ತಿರುವ ಬಿಜೆಪಿ...

ಬಸ್ ಟಿಕೆಟ್ ತೆಗೆದುಕೊಳ್ಳಬೇಡಿ, ಕರೆಂಟ್  ಬಿಲ್ ಕಟ್ಟಬೇಡಿ!:ಹಳ್ಳಿ ಹಳ್ಳಿ ತಿರುಗಿ ಮಹಿಳೆಯರಿಗೆ ಮನವಿ ಮಾಡುತ್ತಿರುವ ಬಿಜೆಪಿ ಮಾಜಿ ಶಾಸಕ!

spot_img
- Advertisement -
- Advertisement -

ದಾವಣಗೆರೆ: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದಾಗಿ ಬಸ್ಸಿನಲ್ಲಿ ಟಿಕೆಟ್ ತೆಗೆದು ಕೊಳ್ಳಬೇಡಿ, ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಮಾಜಿ ಸಚಿವ ಮತ್ತು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮನೆ ಮನೆಗೆ ತೆರಳಿ ಮಹಿಳೆಯರಿಗೆ ಹೇಳುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಹಿಳೆಯರ ಜೊತೆ ಮಾತುಕತೆ ನಡೆಸುತ್ತಿರುವ ರೇಣುಕಾಚಾರ್ಯ ಗ್ಯಾರಂಟಿ ಯೋಜನೆಗಳ ಜಾರಿಗೆ ಆಗ್ರಹಿಸಿ ಎಂದು ಮಹಿಳೆಯರಲ್ಲಿ ಮನವಿ ಮಾಡುತ್ತಿದ್ದಾರೆ. ‌

ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಪ್ರತಿ ಹಳ್ಳಿ ಹಳ್ಳಿ ಸುತ್ತುತ್ತಿರುವ ಎಂ.ಪಿ‌. ರೇಣುಕಾಚಾರ್ಯ. ಬಿಟ್ಟಿ ಗ್ಯಾರೆಂಟಿ ಯೋಜನೆ ಹೇಳಿ ಮತ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಕಾಂಗ್ರೆಸ್ ಕಾಂಗ್ರೆಸ್ ನುಡಿದಂತೆ ನಡೆದಿಲ್ಲ, ಜನರು ಜಾಗೃತರಾಗಿ, ಚುನಾವಣೆಯಲ್ಲಿ ನೀಡಿದ ಆಶ್ವಾಸನೆ ಪೂರೈಕೆಗೆ ಒತ್ತಾಯಿಸಿ ಎಂದು ಜನರಿಗೆ ಹೇಳುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಎಂ.ಪಿ. ರೇಣುಕಾಚಾರ್ಯ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಿ.ಜಿ. ಶಾಂತನಗೌಡ ವಿರುದ್ಧ ಸೋಲನುಭವಿಸಿದ್ದರು.

- Advertisement -
spot_img

Latest News

error: Content is protected !!