- Advertisement -
- Advertisement -
ಶಿರಸಿ: ಪಿಎಫ್ಐ ಮತ್ತು ಎಸ್ ಡಿಪಿಐ ಸಂಘಟನೆಗಳ ಕಾರ್ಯಚಟುವಟಿಕೆಯ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾತನಾಡಿದ ಗೃಹ ಸಚಿವರು, ಶಾಂತಿ ಕದಡುವ ಕೆಲಸ ಮಾಡುವ ಪಿಎಫ್ಐ ಮತ್ತು ಎಸ್ ಡಿಪಿಐ ಸಂಘಟನೆಗಳನ್ನು ನಿಷೇಧ ಮಾಡುವ ಬದಲು ಅವರ ಕಾರ್ಯಚಟುವಟಿಕೆ ಮೇಲೆ ನಿಗಾ ಇಡುವುದು ಮುಖ್ಯ ಎಂದು ತಿಳಿಸಿದ್ದಾರೆ.
ಸಂಘಟನೆಗಳನ್ನು ನಿಷೇಧಿಸುವ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು ಎಂದಿರುವ ಆರಗ ಜ್ಞಾನೇಂದ್ರ, ಹಿಂದೂ ಸಮಾಜ ಯಾರಿಗೂ ಕೆಟ್ಟದು ಮಾಡಿಲ್ಲ, ಕಾಂಗ್ರೆಸ್ ನವರು ಹಿಂದೂ ಸಮಾಜದ ವಿರುದ್ಧ ಹೇಳಿಕೆ ಕೊಟ್ಟಾಗ ಕಳೆದು ಹೋಗಿದ್ದಾರೆ ಎಂದು ಹೇಳಿದ್ದಾರೆ.
- Advertisement -