- Advertisement -
- Advertisement -
ಉಡುಪಿ; ಮೂವತ್ತೈದು ಅಡಿ ಆಳದ ಬಾವಿಗೆ ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಉದ್ಯಾವರ ಸಂಪಿಗೆ ನಗರದ ಮಾಂಗೋಡು ದೇವಸ್ಥಾನದ ಬಳಿ ನಡೆದಿದೆ.
ಸ್ಥಳೀಯ ನಿವಾಸಿ ಶಶೀಂದ್ರ ರಕ್ಷಿಸಲ್ಪಟ್ಟ ವ್ಯಕ್ತಿ. ಇವರು ಮನೆ ಸಮೀಪದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಗಾಯಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -